MIRROR FOCUS

ಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರಗಾಲ(Drought) ಬಂದ್ರೆ ಜನ- ಜಾನುವಾರು, ಕಾಡು ಪ್ರಾಣಿ ಪಕ್ಷಿಗಳಿಂದ(Animal-Birds) ಹಿಡಿದು ಕ್ರಿಮಿ ಕೀಟಗಳಿಗೂ ತೊಂದರೆ ತಪ್ಪಿದ್ದಲ್ಲ. ಎಲ್ಲೆಲ್ಲೂ ನೀರು ಆಹಾರಕ್ಕಾಗಿ(Water-Food) ಪರದಾಡುವ ಪರಿಸ್ಥಿತಿ ಬಂದೊದಗುತ್ತದೆ. ಮಳೆಯ ಕೊರತೆಯಿಂದ(Less rain) ಈ ಬಾರಿ ಜಾನುವಾರುಗಳ(Cattle) ಮೇವಿಗೂ(Fodder) ಸಂಕಷ್ಟಪಡುವಂತಾಗಿದೆ. ಇದರಿಂದ ಮೇವಿಗೂ ಹೆಚ್ಚಿನ ಬೇಡಿಕೆ ಬಂದಿದೆ. ಇನ್ನೇನು ಮೇವು ಮಾರಾಟ ಮಾಡುವ ರೈತರಿಗೆ (Farmers) ಸದ್ಯ ಸುಗ್ಗಿ ಕಾಲ ಎನ್ನಬಹುದು. ಮಹಾರಾಷ್ಟ್ರದಿಂದ(Maharastra) ಬೆಳಗಾವಿಗೆ(Belagavi) ಬಂದು ಮೇವು  ಕೊಂಡೊಯ್ಯುವವರ ಸಂಖ್ಯೆಯೂ ಹೆಚ್ಚಾಗಿದೆ.

Advertisement

ಮೇವಿಗೆ ಅಭಾವ : ದನಕರುಗಳಿಗೆ ಜೋಳದ ದಂಟು, ತೊಗರಿ ಹೊಟ್ಟು, ಹುರುಳಿ ಬಳ್ಳಿ, ಶೇಂಗಾ ಹೊಟ್ಟನ್ನು ಮೇವಾಗಿ ಬಳಕೆ ಮಾಡಲಾಗುತ್ತದೆ. ಮಳೆ ಕಡಿಮೆಯಾದ ಪರಿಣಾಮ ತೊಗರಿ ಹೊಟ್ಟು ಹಾಗೂ ಜೋಳದ ದಂಟಿನ ಮೇವಿನ ಅಭಾವ ಉಂಟಾಗಿದೆ. ಹುರುಳಿ ಬಳ್ಳಿಯ ಹೊಟ್ಟು ಹಾಗೂ ಶೇಂಗಾ ಹೊಟ್ಟು ದುಬಾರಿಯಾಗಿದೆ. ತುಸು ಹೆಚ್ಚು ಬೆಲೆಯಾದರೂ ಜೋಳದ ದಂಟಿನ ಮೇವು ಖರೀದಿಗೆ ರೈತರು ಅಲೆದಾಡುತ್ತಿದ್ದಾರೆ.

ದುಪ್ಪಟ್ಟು ರೇಟ್: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದ ಕಾಗವಾಡ ಹಾಗೂ ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಾತ್ರ ಜೋಳದ ಬೆಳೆ ಬೆಳೆಯಲಾಗುತ್ತದೆ. ಈ ವರ್ಷನೀರಿನ ಅಭಾವ ಹಿನ್ನೆಲೆ ಕಡಿಮೆ ಇಳುವರಿ ಬಂದಿದ್ದು ಮಹಾರಾಷ್ಟ್ರದಿಂದ ಬರುವ ರೈತರು ಇಲ್ಲಿನ ಮೇವಿನ ಹುಲ್ಲಿಗೆ 2000 ದಿಂದ 2500 ರೂಪಾಯಿ ನೀಡಿ ಖರೀದಿಸುತ್ತಿದ್ದಾರೆ. ಹಿಂದೆಲ್ಲ ಸಾವಿರದ ಗಡಿ ದಾಟೋದೆ ಕಷ್ಟ ಅಂತಿದ್ದ ಮೇವಿನ ದರ ಈ ಬಾರಿ ಡಬಲ್‌ ಆಗಿದೆ. ಇದು ಗಡಿನಾಡ ರೈತರಿಗೆ ಒಂದಿಷ್ಟು ಖುಷಿ ತಂದಿರುವುದು ಸುಳ್ಳಲ್ಲ.

ಕೇವಲ ಉತ್ತರದಲ್ಲಿ ಮಾತ್ರವಲ್ಲ, ರಾಜ್ಯದಾದ್ಯಂತ ಮೇವಿಗೆ ಈ ಬಾರಿ ಕೊರೆತೆ ಉಂಟಾಗುವ ಎಲ್ಲಾ ಲಕ್ಷಣಗಳಿವೆ. ಜಾನುವಾರಗಳನ್ನು ಈ ಬರಗಾಲದ ಸಮಯದಲ್ಲಿ ಸಾಕುವುದೇ ದೊಡ್ಡ ಸವಾಲಾಗಿದೆ. ನೀರಿಗೂ ಅಭಾವ ಉಂಟಾಗಲಿದೆ. ಸರ್ಕಾರ ಈ ನಿಟ್ಟಿನಲ್ಲಿ ಸರಿಯಾದ ಕ್ರಮ ಕೈಗೊಳ್ಳದಿದ್ದರೆ, ರೈತರು ಕಷ್ಟ ಪಡಬೇಕಾಗುತ್ತದೆ. ಜಾನುವಾರು ಸಾಕುವ ಅಲ್ಪ ಸ್ವಲ್ಪ ಮಂದಿಯೂ ಇದನ್ನು ಕೈಬಿಡುವ ಯೋಚನೆಯನ್ನು ಮಾಡಬಹುದು. ದನ, ಕರುಗಳು ಕಟುಕರ ಕೈ ಸೇರುವುದರಲ್ಲಿ ಸಂದೇಹವಿಲ್ಲ.

– ಅಂತರ್ಜಾಲ ಮಾಹಿತಿ

Due to the lack of rain (Less rain) this time, cattle fodder (Fodder) is suffering. Due to this, the demand for fodder has also increased. For the farmers who sell fodder, it is harvest season. The number of people coming to Belagavi from Maharashtra to take fodder has also increased.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

14 hours ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

14 hours ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

1 day ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

1 day ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

1 day ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago