Advertisement
MIRROR FOCUS

ಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವ

Share

ಬರಗಾಲ(Drought) ಬಂದ್ರೆ ಜನ- ಜಾನುವಾರು, ಕಾಡು ಪ್ರಾಣಿ ಪಕ್ಷಿಗಳಿಂದ(Animal-Birds) ಹಿಡಿದು ಕ್ರಿಮಿ ಕೀಟಗಳಿಗೂ ತೊಂದರೆ ತಪ್ಪಿದ್ದಲ್ಲ. ಎಲ್ಲೆಲ್ಲೂ ನೀರು ಆಹಾರಕ್ಕಾಗಿ(Water-Food) ಪರದಾಡುವ ಪರಿಸ್ಥಿತಿ ಬಂದೊದಗುತ್ತದೆ. ಮಳೆಯ ಕೊರತೆಯಿಂದ(Less rain) ಈ ಬಾರಿ ಜಾನುವಾರುಗಳ(Cattle) ಮೇವಿಗೂ(Fodder) ಸಂಕಷ್ಟಪಡುವಂತಾಗಿದೆ. ಇದರಿಂದ ಮೇವಿಗೂ ಹೆಚ್ಚಿನ ಬೇಡಿಕೆ ಬಂದಿದೆ. ಇನ್ನೇನು ಮೇವು ಮಾರಾಟ ಮಾಡುವ ರೈತರಿಗೆ (Farmers) ಸದ್ಯ ಸುಗ್ಗಿ ಕಾಲ ಎನ್ನಬಹುದು. ಮಹಾರಾಷ್ಟ್ರದಿಂದ(Maharastra) ಬೆಳಗಾವಿಗೆ(Belagavi) ಬಂದು ಮೇವು  ಕೊಂಡೊಯ್ಯುವವರ ಸಂಖ್ಯೆಯೂ ಹೆಚ್ಚಾಗಿದೆ.

ಮೇವಿಗೆ ಅಭಾವ : ದನಕರುಗಳಿಗೆ ಜೋಳದ ದಂಟು, ತೊಗರಿ ಹೊಟ್ಟು, ಹುರುಳಿ ಬಳ್ಳಿ, ಶೇಂಗಾ ಹೊಟ್ಟನ್ನು ಮೇವಾಗಿ ಬಳಕೆ ಮಾಡಲಾಗುತ್ತದೆ. ಮಳೆ ಕಡಿಮೆಯಾದ ಪರಿಣಾಮ ತೊಗರಿ ಹೊಟ್ಟು ಹಾಗೂ ಜೋಳದ ದಂಟಿನ ಮೇವಿನ ಅಭಾವ ಉಂಟಾಗಿದೆ. ಹುರುಳಿ ಬಳ್ಳಿಯ ಹೊಟ್ಟು ಹಾಗೂ ಶೇಂಗಾ ಹೊಟ್ಟು ದುಬಾರಿಯಾಗಿದೆ. ತುಸು ಹೆಚ್ಚು ಬೆಲೆಯಾದರೂ ಜೋಳದ ದಂಟಿನ ಮೇವು ಖರೀದಿಗೆ ರೈತರು ಅಲೆದಾಡುತ್ತಿದ್ದಾರೆ.

ದುಪ್ಪಟ್ಟು ರೇಟ್: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದ ಕಾಗವಾಡ ಹಾಗೂ ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಾತ್ರ ಜೋಳದ ಬೆಳೆ ಬೆಳೆಯಲಾಗುತ್ತದೆ. ಈ ವರ್ಷನೀರಿನ ಅಭಾವ ಹಿನ್ನೆಲೆ ಕಡಿಮೆ ಇಳುವರಿ ಬಂದಿದ್ದು ಮಹಾರಾಷ್ಟ್ರದಿಂದ ಬರುವ ರೈತರು ಇಲ್ಲಿನ ಮೇವಿನ ಹುಲ್ಲಿಗೆ 2000 ದಿಂದ 2500 ರೂಪಾಯಿ ನೀಡಿ ಖರೀದಿಸುತ್ತಿದ್ದಾರೆ. ಹಿಂದೆಲ್ಲ ಸಾವಿರದ ಗಡಿ ದಾಟೋದೆ ಕಷ್ಟ ಅಂತಿದ್ದ ಮೇವಿನ ದರ ಈ ಬಾರಿ ಡಬಲ್‌ ಆಗಿದೆ. ಇದು ಗಡಿನಾಡ ರೈತರಿಗೆ ಒಂದಿಷ್ಟು ಖುಷಿ ತಂದಿರುವುದು ಸುಳ್ಳಲ್ಲ.

ಕೇವಲ ಉತ್ತರದಲ್ಲಿ ಮಾತ್ರವಲ್ಲ, ರಾಜ್ಯದಾದ್ಯಂತ ಮೇವಿಗೆ ಈ ಬಾರಿ ಕೊರೆತೆ ಉಂಟಾಗುವ ಎಲ್ಲಾ ಲಕ್ಷಣಗಳಿವೆ. ಜಾನುವಾರಗಳನ್ನು ಈ ಬರಗಾಲದ ಸಮಯದಲ್ಲಿ ಸಾಕುವುದೇ ದೊಡ್ಡ ಸವಾಲಾಗಿದೆ. ನೀರಿಗೂ ಅಭಾವ ಉಂಟಾಗಲಿದೆ. ಸರ್ಕಾರ ಈ ನಿಟ್ಟಿನಲ್ಲಿ ಸರಿಯಾದ ಕ್ರಮ ಕೈಗೊಳ್ಳದಿದ್ದರೆ, ರೈತರು ಕಷ್ಟ ಪಡಬೇಕಾಗುತ್ತದೆ. ಜಾನುವಾರು ಸಾಕುವ ಅಲ್ಪ ಸ್ವಲ್ಪ ಮಂದಿಯೂ ಇದನ್ನು ಕೈಬಿಡುವ ಯೋಚನೆಯನ್ನು ಮಾಡಬಹುದು. ದನ, ಕರುಗಳು ಕಟುಕರ ಕೈ ಸೇರುವುದರಲ್ಲಿ ಸಂದೇಹವಿಲ್ಲ.

– ಅಂತರ್ಜಾಲ ಮಾಹಿತಿ

Due to the lack of rain (Less rain) this time, cattle fodder (Fodder) is suffering. Due to this, the demand for fodder has also increased. For the farmers who sell fodder, it is harvest season. The number of people coming to Belagavi from Maharashtra to take fodder has also increased.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

11 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

13 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

16 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago