Advertisement
MIRROR FOCUS

ಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವ

Share

ಬರಗಾಲ(Drought) ಬಂದ್ರೆ ಜನ- ಜಾನುವಾರು, ಕಾಡು ಪ್ರಾಣಿ ಪಕ್ಷಿಗಳಿಂದ(Animal-Birds) ಹಿಡಿದು ಕ್ರಿಮಿ ಕೀಟಗಳಿಗೂ ತೊಂದರೆ ತಪ್ಪಿದ್ದಲ್ಲ. ಎಲ್ಲೆಲ್ಲೂ ನೀರು ಆಹಾರಕ್ಕಾಗಿ(Water-Food) ಪರದಾಡುವ ಪರಿಸ್ಥಿತಿ ಬಂದೊದಗುತ್ತದೆ. ಮಳೆಯ ಕೊರತೆಯಿಂದ(Less rain) ಈ ಬಾರಿ ಜಾನುವಾರುಗಳ(Cattle) ಮೇವಿಗೂ(Fodder) ಸಂಕಷ್ಟಪಡುವಂತಾಗಿದೆ. ಇದರಿಂದ ಮೇವಿಗೂ ಹೆಚ್ಚಿನ ಬೇಡಿಕೆ ಬಂದಿದೆ. ಇನ್ನೇನು ಮೇವು ಮಾರಾಟ ಮಾಡುವ ರೈತರಿಗೆ (Farmers) ಸದ್ಯ ಸುಗ್ಗಿ ಕಾಲ ಎನ್ನಬಹುದು. ಮಹಾರಾಷ್ಟ್ರದಿಂದ(Maharastra) ಬೆಳಗಾವಿಗೆ(Belagavi) ಬಂದು ಮೇವು  ಕೊಂಡೊಯ್ಯುವವರ ಸಂಖ್ಯೆಯೂ ಹೆಚ್ಚಾಗಿದೆ.

ಮೇವಿಗೆ ಅಭಾವ : ದನಕರುಗಳಿಗೆ ಜೋಳದ ದಂಟು, ತೊಗರಿ ಹೊಟ್ಟು, ಹುರುಳಿ ಬಳ್ಳಿ, ಶೇಂಗಾ ಹೊಟ್ಟನ್ನು ಮೇವಾಗಿ ಬಳಕೆ ಮಾಡಲಾಗುತ್ತದೆ. ಮಳೆ ಕಡಿಮೆಯಾದ ಪರಿಣಾಮ ತೊಗರಿ ಹೊಟ್ಟು ಹಾಗೂ ಜೋಳದ ದಂಟಿನ ಮೇವಿನ ಅಭಾವ ಉಂಟಾಗಿದೆ. ಹುರುಳಿ ಬಳ್ಳಿಯ ಹೊಟ್ಟು ಹಾಗೂ ಶೇಂಗಾ ಹೊಟ್ಟು ದುಬಾರಿಯಾಗಿದೆ. ತುಸು ಹೆಚ್ಚು ಬೆಲೆಯಾದರೂ ಜೋಳದ ದಂಟಿನ ಮೇವು ಖರೀದಿಗೆ ರೈತರು ಅಲೆದಾಡುತ್ತಿದ್ದಾರೆ.

ದುಪ್ಪಟ್ಟು ರೇಟ್: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದ ಕಾಗವಾಡ ಹಾಗೂ ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಾತ್ರ ಜೋಳದ ಬೆಳೆ ಬೆಳೆಯಲಾಗುತ್ತದೆ. ಈ ವರ್ಷನೀರಿನ ಅಭಾವ ಹಿನ್ನೆಲೆ ಕಡಿಮೆ ಇಳುವರಿ ಬಂದಿದ್ದು ಮಹಾರಾಷ್ಟ್ರದಿಂದ ಬರುವ ರೈತರು ಇಲ್ಲಿನ ಮೇವಿನ ಹುಲ್ಲಿಗೆ 2000 ದಿಂದ 2500 ರೂಪಾಯಿ ನೀಡಿ ಖರೀದಿಸುತ್ತಿದ್ದಾರೆ. ಹಿಂದೆಲ್ಲ ಸಾವಿರದ ಗಡಿ ದಾಟೋದೆ ಕಷ್ಟ ಅಂತಿದ್ದ ಮೇವಿನ ದರ ಈ ಬಾರಿ ಡಬಲ್‌ ಆಗಿದೆ. ಇದು ಗಡಿನಾಡ ರೈತರಿಗೆ ಒಂದಿಷ್ಟು ಖುಷಿ ತಂದಿರುವುದು ಸುಳ್ಳಲ್ಲ.

ಕೇವಲ ಉತ್ತರದಲ್ಲಿ ಮಾತ್ರವಲ್ಲ, ರಾಜ್ಯದಾದ್ಯಂತ ಮೇವಿಗೆ ಈ ಬಾರಿ ಕೊರೆತೆ ಉಂಟಾಗುವ ಎಲ್ಲಾ ಲಕ್ಷಣಗಳಿವೆ. ಜಾನುವಾರಗಳನ್ನು ಈ ಬರಗಾಲದ ಸಮಯದಲ್ಲಿ ಸಾಕುವುದೇ ದೊಡ್ಡ ಸವಾಲಾಗಿದೆ. ನೀರಿಗೂ ಅಭಾವ ಉಂಟಾಗಲಿದೆ. ಸರ್ಕಾರ ಈ ನಿಟ್ಟಿನಲ್ಲಿ ಸರಿಯಾದ ಕ್ರಮ ಕೈಗೊಳ್ಳದಿದ್ದರೆ, ರೈತರು ಕಷ್ಟ ಪಡಬೇಕಾಗುತ್ತದೆ. ಜಾನುವಾರು ಸಾಕುವ ಅಲ್ಪ ಸ್ವಲ್ಪ ಮಂದಿಯೂ ಇದನ್ನು ಕೈಬಿಡುವ ಯೋಚನೆಯನ್ನು ಮಾಡಬಹುದು. ದನ, ಕರುಗಳು ಕಟುಕರ ಕೈ ಸೇರುವುದರಲ್ಲಿ ಸಂದೇಹವಿಲ್ಲ.

– ಅಂತರ್ಜಾಲ ಮಾಹಿತಿ

Due to the lack of rain (Less rain) this time, cattle fodder (Fodder) is suffering. Due to this, the demand for fodder has also increased. For the farmers who sell fodder, it is harvest season. The number of people coming to Belagavi from Maharashtra to take fodder has also increased.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

11 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

11 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

20 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago