Advertisement
MIRROR FOCUS

ದೇಶದಲ್ಲಿ ಹೆಚ್ಚಿದ ವಿದ್ಯುತ್ ಬೇಡಿಕೆ : ಅನಿಲ ಆಧಾರಿತ ಸ್ಥಾವರಗಳ ಕಾರ್ಯಾರಂಭಕ್ಕೆ ಕೇಂದ್ರ ಸರ್ಕಾರ ಸೂಚನೆ

Share

ಈ ಬಾರಿಯ ಬೇಸಿಗೆ ಬಿಸಿ ಎಲ್ಲಾ ಕ್ಷೇತ್ರದ ಮೇಲೂ ಪರಿಣಾಮ ಬೀರುತ್ತಿದೆ. ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ತನ್ನ ಕೆಟ್ಟ ಪ್ರಭಾವ ಬೀರುತ್ತಿದೆ, ದೇಶಾದ್ಯಂತ ಬೇಸಿಗೆಯ ವಾತಾವರಣ(Summer) ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ವಿದ್ಯುತ್​ ಬೇಡಿಕೆಯೂ ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು(Power demand) ಪೂರೈಸಲು ನೆರವಾಗುವ ನಿಟ್ಟಿನಲ್ಲಿ ಅನಿಲ ಆಧಾರಿತ ವಿದ್ಯುತ್ ಸ್ಥಾವರಗಳನ್ನು(GAS BASED POWER) ಕಾರ್ಯಗತಗೊಳಿಸಲು ಸರ್ಕಾರ(Govt) ನಿರ್ಧರಿಸಿದೆ ಎಂದು ವಿದ್ಯುತ್ ಸಚಿವಾಲಯ(Ministry of Power) ತಿಳಿಸಿದೆ.

“ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳಿಂದ ಗರಿಷ್ಠ ವಿದ್ಯುತ್ ಉತ್ಪಾದನೆ ಮಾಡಲು ವಿದ್ಯುತ್ ಕಾಯ್ದೆ, 2003 ರ ಸೆಕ್ಷನ್ 11 ರ ಅಡಿಯಲ್ಲಿ ಸರ್ಕಾರವು ಎಲ್ಲಾ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳಿಗೆ ನಿರ್ದೇಶನಗಳನ್ನು ನೀಡಿದೆ. ಈ ಸೆಕ್ಷನ್ ಅಡಿಯಲ್ಲಿ, ಉತ್ಪಾದನಾ ಕಂಪನಿಯು ಅಸಾಧಾರಣ ಸಂದರ್ಭಗಳಲ್ಲಿ ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ಯಾವುದೇ ಉತ್ಪಾದನಾ ಕೇಂದ್ರವನ್ನು ನಿರ್ವಹಿಸಬೇಕು ಎಂದು ರಾಜ್ಯ ಅಥವಾ ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಬಹುದು” ಎಂದು ಇಂಧನ ಸಚಿವಾಲಯ ತಿಳಿಸಿದೆ.

ಮುಖ್ಯವಾಗಿ ವಾಣಿಜ್ಯ ಕಾರಣಗಳಿಂದಾಗಿ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳ (ಜಿಬಿಎಸ್) ಸಾಮರ್ಥ್ಯವು ಪ್ರಸ್ತುತ ಗಮನಾರ್ಹ ಮಟ್ಟದಲ್ಲಿ ಬಳಕೆಯಾಗುತ್ತಿಲ್ಲ. ಆಮದು ಮಾಡಿಕೊಂಡ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ಅನ್ವಯವಾಗುವಂತೆ ಸೆಕ್ಷನ್ 11 ರ ಅಡಿಯಲ್ಲಿನ ಆದೇಶವು ಮುಂಬರುವ ಹೆಚ್ಚಿನ ಬೇಡಿಕೆಯ ಅವಧಿಯಲ್ಲಿ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳಿಂದ ವಿದ್ಯುತ್ ಲಭ್ಯತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಈ ಆದೇಶವು ಮೇ 1, 2024 ರಿಂದ ಜೂನ್ 30, 2024 ರವರೆಗೆ ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆಗೆ ಮಾನ್ಯವಾಗಿರುತ್ತದೆ ಎಂದು ಇಂಧನ ಸಚಿವಾಲಯ ತಿಳಿಸಿದೆ. ಅನಿಲ ಆಧಾರಿತ ವಿದ್ಯುತ್ ಅಗತ್ಯವಿರುವ ದಿನಗಳ ಸಂಖ್ಯೆಯನ್ನು ಗ್ರಿಡ್-ಇಂಡಿಯಾ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳಿಗೆ ಮುಂಚಿತವಾಗಿ ತಿಳಿಸಲಿದೆ ಎಂದು ಸಚಿವಾಲಯ ಹೇಳಿದೆ.

ವಿತರಣಾ ಪರವಾನಗಿದಾರರೊಂದಿಗೆ ವಿದ್ಯುತ್ ಖರೀದಿ ಒಪ್ಪಂದಗಳನ್ನು (ಪಿಪಿಎ) ಹೊಂದಿರುವ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳು ಮೊದಲು ತಮ್ಮ ವಿದ್ಯುತ್ ಅನ್ನು ಪಿಪಿಎ ಹೊಂದಿರುವವರಿಗೆ ನೀಡುತ್ತವೆ. ನೀಡಲಾಗುವ ವಿದ್ಯುತ್ ಅನ್ನು ಯಾವುದೇ ಪಿಪಿಎ ಹೊಂದಿರುವವರು ಬಳಸದಿದ್ದರೆ, ಅದನ್ನು ವಿದ್ಯುತ್ ಮಾರುಕಟ್ಟೆಯಲ್ಲಿ ನೀಡಲಾಗುವುದು. ಪಿಪಿಎಗಳಿಗೆ ಸಂಬಂಧಿಸಿರದ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳು ವಿದ್ಯುತ್ ಮಾರುಕಟ್ಟೆಯಲ್ಲಿ ತಾವು ಉತ್ಪಾದಿಸಿದ ವಿದ್ಯುತ್​ ಅನ್ನು ಮಾರಾಟ ಮಾಡಬಹುದು. ಈ ನಿರ್ದೇಶನವನ್ನು ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ಕೇಂದ್ರ ವಿದ್ಯುತ್ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಬೇಸಿಗೆಯಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಪೂರೈಸಲು ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago