ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

June 23, 2025
11:40 AM

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಹುಮ್ಮಸ್ಸು ನೀಡಿದೆ. ಉತ್ತಮ ಮಳೆಯಿಂದಾಗಿ ಕೃಷಿ ಭೂಮಿ ಹದವಾಗಿದ್ದು, ಬೀಜ ಬಿತ್ತನೆಯಲ್ಲಿ ಉತ್ತಮ ಪ್ರಗತಿ ಕಂಡುಬಂದಿದೆ.  ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ 3 ಲಕ್ಷ 14 ಸಾವಿರ ಹೆಕ್ಟೇರ್ ಬಿತ್ತನೆ ಪ್ರದೇಶವಿದೆ. ಈ ಪೈಕಿ 2.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಪೂರ್ಣಗೊಂಡಿದೆ. ಉಳಿದ ಪ್ರದೇಶಗಳಲ್ಲಿ ಬಿತ್ತನೆ ಕೆಲಸ ಪ್ರಗತಿಯಲ್ಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ.

ಮಳೆ ಆಶ್ರಿತದಲ್ಲಿ 2 ಲಕ್ಷ 50 ಸಾವಿರ ಹೆಕ್ಟೇರ್ ಹಾಗೂ ನೀರಾವರಿಯಲ್ಲಿ 63 ಸಾವಿರದ 769 ಹೆಕ್ಟೇರ್ ಪ್ರದೇಶಗಳಲ್ಲಿ ಬಿತ್ತನೆ ಗುರಿಯಿದೆ. ಈಗಾಗಲೇ, ಮಳೆ ಆಶ್ರಿತದಲ್ಲಿ 2.04 ಲಕ್ಷ ಹೆಕ್ಟೇರ್ ಹಾಗೂ ನೀರಾವರಿಯಲ್ಲಿ 29 ಸಾವಿರ ಹೆಕ್ಟೇರ್ ಬಿತ್ತನೆ ಮುಕ್ತಾಯಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಏಕದಳ, ದ್ವಿದಳ ಧಾನ್ಯ, ಎಣ್ಣೆಕಾಳುಗಳು, ವಾಣಿಜ್ಯ ಬೆಳೆಗಳ ಬಿತ್ತನೆ ನಡೆಯುತ್ತದೆ. ಜಿಲ್ಲೆಯಲ್ಲಿ ರೈತರ ಸಂಖ್ಯೆ ಹೆಚ್ಚಿರುವುದರಿಂದ, ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಬಿತ್ತನೆ ಪ್ರದೇಶಕ್ಕೆ ತಕ್ಕಂತೆ ಬೀಜ ಹಾಗೂ ಗೊಬ್ಬರ ಪೂರೈಕೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.  ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ. ಕೃಷಿ ಇಲಾಖೆಯ ಬಳಿ 26 ಸಾವಿರ 944 ಮೆಟ್ರಿಕ್ ಟನ್ ರಸಗೊಬ್ಬರ ಸಂಗ್ರಹವಿದೆ ಎಂದು ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?
June 10, 2026
10:30 PM
by: ವಿಶೇಷ ಪ್ರತಿನಿಧಿ
ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror