Advertisement
ಸುದ್ದಿಗಳು

ರಾಜ್ಯದಲ್ಲಿ ಹೆಚ್ಚಿದ ಹೆಚ್3ಎನ್2 ವೈರಸ್ | ಜೊತೆಗೆ ಕೋವಿಡ್-19ನಲ್ಲೂ ಏರಿಕೆ | ಹೆಚ್1ಎನ್1 ಪ್ರಕರಣಗಳಲ್ಲೂ ಹೆಚ್ಚಳ |

Share

ರಾಜ್ಯದಲ್ಲಿ ಈಗಾಗಲೇ ಎಚ್3ಎನ್2 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವಲ್ಲೇ ಕೋವಿಡ್ ಮತ್ತು ಎಚ್1ಎನ್1 (ಹಂದಿ ಜ್ವರ) ಪ್ರಕರಣಗಳು ನಿಧಾನಗತಿಯಲ್ಲಿ ಏರಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ಇದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 500 ದಾಟಿದೆ. ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಅಧ್ಯಕ್ಷ ಡಾ ಎಂಕೆ ಸುದರ್ಶನ್ ಮಾತನಾಡಿ, ಕಳೆದ ಕೆಲವು ವಾರಗಳಿಂದ ಎಚ್3ಎನ್2 ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದರ ಜೊತೆಗೆ ಎಚ್1ಎನ್1 ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯವು ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, ನೆರೆಯ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳದಲ್ಲೂ ವೈರಸ್‌ ಹೆಚ್ಚಾಗಿ ಹರಡುತ್ತಿರುವುದು ಕಂಡುಬರುತ್ತಿದೆ. ಕೋವಿಡ್ ಪ್ರಕರಣಗಳಲ್ಲಿ ಏಕಕಾಲದಲ್ಲಿ ಏರಿಕೆಯಾಗುತ್ತಿದ್ದು, ಐಸಿಯು ದಾಖಲಾತಿಗಳ ಸಂಖ್ಯೆಯಲ್ಲಿನ ಹೆಚ್ಚಳವು ಕಳವಳಕಾರಿ ವಿಚಾರವಾಗಿದೆ ಎಂದು ಸುದರ್ಶನ್ ಅವರು ತಿಳಿಸಿದ್ದಾರೆ.

ಮಾರ್ಚ್ 15 ರ ವೇಳೆಗೆ ರಾಜ್ಯದಲ್ಲಿ 119 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣ ಸಂಘ್ಯೆ 560ಕ್ಕೆ ಏರಿಕೆಯಾಗಿದೆ.

ಈ ನಡುವೆ ಕೋವಿಡ್ ನಿಂದಾಗಿ ಮಂಗಳವಾರ ರಾಜ್ಯದಲ್ಲಿ ಒಂದು ಸಾವು ಕೂಡ ವರದಿಯಾಗಿದೆ. ಮೃತರು ಬೆಂಗಳೂರಿನ 71 ವರ್ಷದ ವ್ಯಕ್ತಿಯಾಗಿದ್ದು, ಇವರಲ್ಲಿ ಜ್ವರ, ಕೆಮ್ಮು ಮತ್ತು ಉಸಿರಾಟದ ಲಕ್ಷಣಗಳು ಕಂಡು ಬಂದಿತ್ತು. ಮತ್ತು ವ್ಯಕ್ತಿ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಂತಹ ಇತರ ರೋಗಗಳನ್ನೂ ಹೊಂದಿದ್ದರು ಎಂದು ತಿಳಿದುಬಂದಿದೆ.

ಪ್ರಸ್ತುತ ಐಸಿಯುಗೆ ದಾಖಲಾಗುತ್ತಿರುವ ಹೆಚ್ಚಿನ ರೋಗಿಗಳು ಇತರೆ ದೀರ್ಘಕಾಲಿಕ ರೋಗಗಳನ್ನು ಹೊಂದಿರುವುದು ಕಂಡು ಬರುತ್ತಿದೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಆಸ್ಪತ್ರೆಗಳಲ್ಲಿ ನಿಗಾ ಹೆಚ್ಚಿಸಲಾಗಿದ್ದು, ಸೋಂಕು ಪ್ರಕರಣಗಳ ಹೆಚ್ಚಳವು ಆತಂಕಕಾರಿಯಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಐಎಲ್ಐ ಮತ್ತು ಕೋವಿಡ್ ಪ್ರಕರಣಗಳ ಲಕ್ಷಣಗಳು ಬಹುತೇಕ ಒಂದೇ ಆಗಿದ್ದು, ರೋಗ ಲಕ್ಷಣ ಇರುವ ಎಲ್ಲಾ ರೋಗಿಗಳ ಮೇಲೆ ನಿಗಾ ಇರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.

ಮಾರ್ಚ್ 13 ರಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ 2018 ರಿಂದ ಮಾರ್ಚ್ 2023 ರವರೆಗೆ 4,700 ಹೆಚ್1ಎನ್1 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 201 ಜನರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಹವಾಮಾನದಲ್ಲಿನ ಬದಲಾವಣೆಯು ಐಎಲ್ಐ ಹಾಗೂ ಸಾರಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

19 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago