Advertisement
MIRROR FOCUS

ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು | 4 ದಿನದಲ್ಲಿ ಡ್ಯಾಂಗೆ 7 ಟಿಎಂಸಿ ನೀರು ಹರಿವು |

Share

ಮುಂಗಾರು ಮಳೆ(Monsoon) ಈ ಬಾರಿ ಭರ್ಜರಿಯಾಗಿ ಸುರಿದ ಹಿನ್ನೆಲೆ ರಾಜ್ಯದ ಬಹುತೇಕ ಜಲಾಶಯಗಳು(Dam) ಭರ್ತಿಯಾಗಿತ್ತು. ಅದೇ ರೀತಿ ಮಧ್ಯ ಕರ್ನಾಟಕದ(Karnataka) ಜೀವನಾಡಿಯಾಗಿರುವ ತುಂಗಾಭದ್ರಾ ಜಲಾಶಯವು ತುಂಬಿತ್ತು. ಆದರೆ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟಗೇಟ್ (Crest Gate) ಕೊಚ್ಚಿಕೊಂಡು ಹೋಗಿದ್ದು ದೊಡ್ಡ ಮಟ್ಟದ ಆತಂಕವನ್ನು ಹೆಚ್ಚಿಸಿತ್ತು. ಆದರೆ ವಾರದ ನಂತರ ಜಲಾಶಯಕ್ಕೆ ಸ್ಟಾಪ್ ಲಾಗ್‌ಗೇಟ್ ಅಳವಡಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದರು. ಸದ್ಯ ಡ್ಯಾಂ ಗೆ ಒಳಹರಿವು ಹೆಚ್ಚಾಗ್ತಿದ್ದು, ಕಳೆದ 4 ದಿನಗಳಲ್ಲಿ 7 ಟಿಎಂಸಿ ನೀರು ಹರಿದು ಬಂದಿದೆ. ಮತ್ತೊಮ್ಮೆ ಡ್ಯಾಂ ತುಂಬುವ ಭರವಸೆ ಮೂಡಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ಜಲಾಶಯದಿಂದ ಒಂದೇ ವಾರದಲ್ಲಿ 41 ಟಿಎಂಸಿಗೂ ಹೆಚ್ಚು ನೀರು ವ್ಯರ್ಥವಾಗಿ ಹರಿದು ಹೋಗಿತ್ತು. ಸತತ ಶ್ರಮದಿಂದ ಸ್ಟಾಪ್‌ಲಾಗ್ ಗೇಟ್‌ನ ಐದು ಎಲಿಮೆಂಟ್‌ಗಳನ್ನು ಅಳವಡಿಸಿ, ಹರಿಯುವ ನೀರನ್ನು ತಡೆಯುವಲ್ಲಿ ಗೇಟ್ ನಿಪುಣ ಕನ್ನಯ್ಯ ನಾಯ್ಡು ಮತ್ತು ತಂಡ ಸಫಲವಾಗಿದೆ. ಡ್ಯಾಂ ನೀರು ಖಾಲಿಯಾಗುವ ಆತಂಕದಲ್ಲಿದ್ದ ಈ ಭಾಗದ ಜನರ ಆತಂಕವನ್ನು ದೂರ ಮಾಡಿದ್ದಾರೆ. ಸದ್ಯ ಒಳಹರಿವು ಹೆಚ್ಚಾಗಿದ್ದು ಜನರಲ್ಲಿ ಡ್ಯಾಂ ತುಂಬುವ ಆಶಾಭಾವನೆ ಮೂಡಿದೆ. 

ಆಗಸ್ಟ್ 17 ರಂದು ಜಲಾಶಯದಲ್ಲಿ 71 ಟಿಎಂಸಿ ನೀರು ಇತ್ತು. ಆದರೆ ಕಳೆದ ನಾಲ್ಕು ದಿನಗಳಲ್ಲಿ ಪ್ರತಿ ದಿನ ಒಂದೂವರೆ ಟಿಎಂಸಿ ಅಷ್ಟು ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಇಂದು ಕೂಡ 31,033 ಕ್ಯೂಸೆಕ್‌ ನೀರು ಒಳ ಹರಿವು ಇದ್ದು, ಜಲಾಶಯದ ನೀರಿನ ಸಂಗ್ರಹ 78 ಟಿಎಂಸಿಗೆ ಹೆಚ್ಚಳವಾಗಿದೆ. ನಾಲ್ಕು ದಿನದಲ್ಲಿ ಏಳು ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಗೇಟ್ ಸಂಪೂರ್ಣವಾಗಿ ಬಂದ್ ಆಗಿರುವುದು ಒಂದು ಕಡೆ ಖುಷಿ ಹೆಚ್ಚಾದ್ರೆ ಇನ್ನೊಂದು ಕಡೆ ಮತ್ತೆ ಜಲಾಶಯಕ್ಕೆ ನೀರು ಬರುತ್ತಿರುವುದು ಜನರ ಸಂತಸವನ್ನು ಇಮ್ಮಡಿಗೊಳಿಸಿದೆ. 

ಕ್ಯುಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು? : ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯುಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯುಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯುಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

3 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

3 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

14 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

14 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

1 day ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

1 day ago