Advertisement
MIRROR FOCUS

#Niphavirus | ಹೆಚ್ಚಿದ ನಿಫಾ ವೈರಸ್ ಸೋಂಕು ಹಿನ್ನೆಲೆ | ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೈ ಅಲರ್ಟ್ |

Share

ಬೆಂಗಳೂರಿನ ಬನ್ನೇರುಘಟ್ಟ ಪಾರ್ಕ್‌ ಅಂದ ಕೂಡಲೇ ಅಲ್ಲಿರುವ ಪರಿಸರ, ಪ್ರಾಣಿ ಪಕ್ಷಿಗಳು, ಸುಂದರ ಪ್ರಕೃತಿ ನೆನಪಾಗುತ್ತದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಂದ್ರೆ, ಸಾವಿರಾರು ಸಂಖ್ಯೆಯ ಪ್ರಾಣಿ-ಪಕ್ಷಿಗಳಿರುವ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಪ್ರತಿದಿನ ಸಾಕಷ್ಟು ಸಂಖ್ಯೆಯ ಪ್ರವಾಸಿಗರು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ‌ನೀಡುತ್ತಾರೆ. ಆದ್ರೆ, ನೆರೆರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆಯಾಗಿದ್ದು, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈಗಾಗಲೇ ಪಕ್ಷಿಗಳಿರುವ ಕೇಜ್ ಗಳ ಬಳಿ ದಿನಕ್ಕೆ ಎರಡು ಬಾರಿಯಂತೆ ಔಷಧಿ ಸ್ಪ್ರೇ ಮಾಡಲಾಗುತ್ತಿದೆ. ಹೊರಗಿನಿಂದ ಪಾರ್ಕ್​ನ ಒಳ ಬರುವ ಬಾವಲಿಗಳು ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದು, ಪಾರ್ಕ್​ನಲ್ಲಿನ ಪ್ರಾಣಿ-ಪಕ್ಷಿಗಳಿಗೆ ನೀಡುವ ಆಹಾರ ಹಾಗೂ ಅವುಗಳ ಆರೋಗ್ಯದ ಮೇಲೂ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ಹೊರಗಿನಿಂದ ಬರುವ ಪ್ರವಾಸಿಗರು ಪ್ರವೇಶದ್ವಾರ, ನಿರ್ಗಮನ ದ್ವಾರಗಳಲ್ಲಿ ಸೋಂಕು ನಿವಾರಕ ದ್ರಾವಣದ ಮೇಲೆ ಕಾಲಿಟ್ಟು ಒಳಗೆ ಬರುವ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿದೆ. ಪಾರ್ಕ್ ಒಳಭಾಗ ಹಾಗೂ ಹೊರಭಾಗದ ಇಕ್ಕೆಲಗಳಲ್ಲಿ ಬ್ಲೀಚಿಂಗ್ ಪೌಡರ್ ಹಾಗೂ ಸುಣ್ಣದ ಪುಡಿ ಹಾಕಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಆ್ಯಂಟಿ ವೈರಸ್ ಡಿಸ್ ಇನ್ಫೇಕ್ಷನ್​ನಿಂದ ಪಾರ್ಕ್​ನ ಸುತ್ತಲೂ ಸ್ಪ್ರೇ ಮಾಡಲಾಗುತ್ತಿದೆ.

Advertisement

ಪ್ರತಿ ದಿನ ಸಾವಿರಾರು ಜನ ಬೇರೆ ರಾಜ್ಯದಿಂದ ಆಗಮಿಸುವ ಹಿನ್ನೆಲೆ ಪ್ರವಾಸಿಗರಿಗೆ ಥರ್ಮಲ್ ಸ್ಕ್ರೀನಿಂಗ್‌ ಮಾಡಲು ಸಿದ್ದತೆ ಮಾಡಲಾಗುತ್ತಿದೆ. ಸರ್ಕಾರ ಮುಂದಿನ ದಿನಗಳಲ್ಲಿ ಮಾರ್ಗಸೂಚಿಯನ್ನ ಹೊರಡಿಸಿದ್ರೆ ಮಾಸ್ಕ್ ಕಡ್ಡಾಯ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ಹೇಳಿದರು. ಒಟ್ಟಿನಲ್ಲಿ ಕೇರಳದಲ್ಲಿ ನಿಫಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರನ್ನು ಆತಂಕಕ್ಕೀಡಾಗುವಂತೆ ಮಾಡಿದೆ. ಇದರಿಂದಾಗಿ ಕರ್ನಾಟಕದಲ್ಲೂ ನಿಫಾ ವೈರಸ್ ಭೀತಿ ಎದುರಾಗಿದ್ದು, ಯಾವುದೇ ರೀತಿಯ ಸಮಸ್ಯೆಯಾಗದಂತೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅಧಿಕಾರಿಗಳ ಹಾಗೂ ಸಿಬ್ಬಂದಿ ವರ್ಗ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳುವ ಮೂಲಕ ಪ್ರವಾಸಿಗರಲ್ಲಿನ ಆತಂಕವನ್ನು ದೂರ ಮಾಡಿದ್ದಾರೆ.

Source : News Agencies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

16 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

18 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago