ಬೆಂಗಳೂರಿನ ಬನ್ನೇರುಘಟ್ಟ ಪಾರ್ಕ್ ಅಂದ ಕೂಡಲೇ ಅಲ್ಲಿರುವ ಪರಿಸರ, ಪ್ರಾಣಿ ಪಕ್ಷಿಗಳು, ಸುಂದರ ಪ್ರಕೃತಿ ನೆನಪಾಗುತ್ತದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಂದ್ರೆ, ಸಾವಿರಾರು ಸಂಖ್ಯೆಯ ಪ್ರಾಣಿ-ಪಕ್ಷಿಗಳಿರುವ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಪ್ರತಿದಿನ ಸಾಕಷ್ಟು ಸಂಖ್ಯೆಯ ಪ್ರವಾಸಿಗರು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡುತ್ತಾರೆ. ಆದ್ರೆ, ನೆರೆರಾಜ್ಯ ಕೇರಳದಲ್ಲಿ ನಿಫಾ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆಯಾಗಿದ್ದು, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈಗಾಗಲೇ ಪಕ್ಷಿಗಳಿರುವ ಕೇಜ್ ಗಳ ಬಳಿ ದಿನಕ್ಕೆ ಎರಡು ಬಾರಿಯಂತೆ ಔಷಧಿ ಸ್ಪ್ರೇ ಮಾಡಲಾಗುತ್ತಿದೆ. ಹೊರಗಿನಿಂದ ಪಾರ್ಕ್ನ ಒಳ ಬರುವ ಬಾವಲಿಗಳು ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದು, ಪಾರ್ಕ್ನಲ್ಲಿನ ಪ್ರಾಣಿ-ಪಕ್ಷಿಗಳಿಗೆ ನೀಡುವ ಆಹಾರ ಹಾಗೂ ಅವುಗಳ ಆರೋಗ್ಯದ ಮೇಲೂ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ಹೊರಗಿನಿಂದ ಬರುವ ಪ್ರವಾಸಿಗರು ಪ್ರವೇಶದ್ವಾರ, ನಿರ್ಗಮನ ದ್ವಾರಗಳಲ್ಲಿ ಸೋಂಕು ನಿವಾರಕ ದ್ರಾವಣದ ಮೇಲೆ ಕಾಲಿಟ್ಟು ಒಳಗೆ ಬರುವ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿದೆ. ಪಾರ್ಕ್ ಒಳಭಾಗ ಹಾಗೂ ಹೊರಭಾಗದ ಇಕ್ಕೆಲಗಳಲ್ಲಿ ಬ್ಲೀಚಿಂಗ್ ಪೌಡರ್ ಹಾಗೂ ಸುಣ್ಣದ ಪುಡಿ ಹಾಕಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಆ್ಯಂಟಿ ವೈರಸ್ ಡಿಸ್ ಇನ್ಫೇಕ್ಷನ್ನಿಂದ ಪಾರ್ಕ್ನ ಸುತ್ತಲೂ ಸ್ಪ್ರೇ ಮಾಡಲಾಗುತ್ತಿದೆ.
ಪ್ರತಿ ದಿನ ಸಾವಿರಾರು ಜನ ಬೇರೆ ರಾಜ್ಯದಿಂದ ಆಗಮಿಸುವ ಹಿನ್ನೆಲೆ ಪ್ರವಾಸಿಗರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲು ಸಿದ್ದತೆ ಮಾಡಲಾಗುತ್ತಿದೆ. ಸರ್ಕಾರ ಮುಂದಿನ ದಿನಗಳಲ್ಲಿ ಮಾರ್ಗಸೂಚಿಯನ್ನ ಹೊರಡಿಸಿದ್ರೆ ಮಾಸ್ಕ್ ಕಡ್ಡಾಯ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ಹೇಳಿದರು. ಒಟ್ಟಿನಲ್ಲಿ ಕೇರಳದಲ್ಲಿ ನಿಫಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರನ್ನು ಆತಂಕಕ್ಕೀಡಾಗುವಂತೆ ಮಾಡಿದೆ. ಇದರಿಂದಾಗಿ ಕರ್ನಾಟಕದಲ್ಲೂ ನಿಫಾ ವೈರಸ್ ಭೀತಿ ಎದುರಾಗಿದ್ದು, ಯಾವುದೇ ರೀತಿಯ ಸಮಸ್ಯೆಯಾಗದಂತೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅಧಿಕಾರಿಗಳ ಹಾಗೂ ಸಿಬ್ಬಂದಿ ವರ್ಗ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳುವ ಮೂಲಕ ಪ್ರವಾಸಿಗರಲ್ಲಿನ ಆತಂಕವನ್ನು ದೂರ ಮಾಡಿದ್ದಾರೆ.
Source : News Agencies
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…