Advertisement
MIRROR FOCUS

ಮದುವೆಗಾಗಿ ಮಾದಪ್ಪನ ಸನ್ನಿಧಿಗೆ ಹೆಚ್ಚಿದ ಪಾದಯಾತ್ರೆ | ಕೃಷಿಕ ಹುಡುಗರಿಗೆ ಹೆಣ್ಣು ಸಿಗದೆ ಪರದಾಟ..! |

Share

ಇತ್ತೀಚಿನ ದಿನಗಳಲ್ಲಿ ಕೃಷಿ ಯುವಕರಿಗೆ ಹೆಣ್ಣು ಸಿಗುವುದೇ ಬಹಳ ಕಷ್ಟವಾಗಿದೆ. ಯಾವ ಹುಡುಗಿಯರಿಗೂ ಕೃಷಿಕ ಬೇಡ. ಪಟ್ಟಣದ ಯುವಕರೇ ಬೇಕು. ಆದರೆ ಕೃಷಿ ಭೂಮಿ ಬೇಕು, ಕೃಷಿಕ ಬೇಡ…!. ಹೀಗಿರುವಾಗ  ಹೆಣ್ಣು ಕರುಣಿಸೆಂದು ಮಾದಪ್ಪನ (Male Mahadeshwara Betta) ಸನ್ನಿಧಿಗೆ ಪಾದಯಾತ್ರೆ ಮಾಡುವವರ ಸಂಖ್ಯೆ (Padayatra For Bride) ದಿನೇ ದಿನೇ ಹೆಚ್ಚಾಗುತ್ತಿದೆ.  ಮದುವೆಯಾಗದ ಯುವಕರೊಂದೇ ಅಲ್ಲದೇ, ಯುವಕರ ಪೋಷಕರು(Parents) ಸಹ ಕಾಲ್ನಡಿಗೆಯಲ್ಲಿ ಬಂದು ತಮ್ಮ ಮಕ್ಕಳ ವಿವಾಹ(Marrige) ಭಾಗ್ಯಕ್ಕಾಗಿ ಮಹದೇಶ್ವನಿಗೆ ಮೊರೆ ಇಡುತ್ತಿದ್ದಾರೆ.

ಕೃಷಿ ಈ ದೇಶದ ಭವಿಷ್ಯ, ಈ ದೇಶದ ಆತ್ಮ, ನಿಜವೂ ಹೌದು. ಯಾವುದೇ ಬರಗಾಲ, ಯಾವುದೇ ಪ್ರಕೃತಿ ವಿಕೋಪದಿಂದ ಕೃಷಿಗೆ ಹಾನಿಯಾದರೆ ಮುಂದಿನ ವರ್ಷ ಹೊಟ್ಟೆಗೆ ಬೇಕಾದ ಎಲ್ಲಾ ವಸ್ತುಗಳು ಧಾರಣೆ ಏರಿಕೆ ಖಚಿತವೇ ಆಗಿದೆ. ಹೀಗಾಗಿ ರೈತ ನೆಮ್ಮದಿಯಿಂದ ಇದ್ದರೆ ಮಾತ್ರವೇ ದೇಶದ ಎಲ್ಲರ ಹೊಟ್ಟೆಗೂ ನೆಮ್ಮದಿ. ಆದರೆ ಇಂದು ಈ ಸರಪಳಿ ತಪ್ಪುತ್ತಿದೆ. ಹಳ್ಳಿಯಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಹೆಣ್ಣು ಸಿಗದೇ ಇದ್ದರೆ ಏಕಾಂಗಿ ಯುವಕ ಕೃಷಿಯಲ್ಲ ಬದುಕುವುದು ಕಷ್ಟ. ಪ್ರತೀ ಅಪ್ಪ-ಅಮ್ಮನಿಗೂ ಮಗನಿಗೆ ಮದುವೆ ಮಾಡಿಸಿ, ಮೊಮ್ಮಗನೋ.. ಮೊಮ್ಮಗಳನ್ನೋ ಕಣ್ತುಂಬಿಕೊಳ್ಳುವ ಆಸೆ ಇರುತ್ತದೆ. ಅಂದರೆ ವಂಶೋದ್ಧಾರ ಆಗಬೇಕು ಎಂದಿರುತ್ತದೆ. ಕೃಷಿಕ ಎನ್ನುವುದೇ ಈಗ ತಪ್ಪಾಗುತ್ತಾ ಎನ್ನುವುದು ಹೆತ್ತವರದೂ ಕೂಡಾ ಪ್ರಶ್ನೆಯಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಂಚೆದೊಡ್ಡಿಯಿಂದ ಒಂದು ಸಾವಿರಕ್ಕೂ ಹೆಚ್ಚು ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಮಾದಪ್ಪನ ಸನ್ನಿಧಿಗೆ ಅಂಚೆದೊಡ್ಡಿ ಹಾಗೂ ಸುತ್ತಮುತ್ತ ನಾಲ್ಕೈದು ಗ್ರಾಮಗಳ ಜನರು ಕಾಲ್ನಡಿಗೆ ಯಾತ್ರೆ ಕೈಗೊಂಡಿದ್ದಾರೆ. ತಮ್ಮ ಗಂಡು ಮಕ್ಕಳಿಗೆ ಮದುವೆಗೆ ಹೆಣ್ಣು ಸಿಗಲಿ ಎಂದು ಹರಕೆ ಹೊತ್ತು ಊರಿಗೆ ಊರೇ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದೆ.

115 ಕಿಮೀ ದೂರದಿಂದ ನಡೆದು ಬಂದರು..! : ಅಂಚೆದೊಡ್ಡಿ ಗ್ರಾಮದಿಂದ ಮಹದೇಶ್ವರ ಬೆಟ್ಟಕ್ಕೆ ಒಟ್ಟು 115 ಕಿಲೋಮೀಟರ್ ದೂರ. ಈ ಗ್ರಾಮದಲ್ಲಿ ಮದುವೆ ವಯಸ್ಸಿಗೆ ಬಂದಿರುವ ನೂರೈವತ್ತಕ್ಕೂ ಹೆಚ್ಚು ಗಂಡು ಮಕ್ಕಳಿದ್ದಾರೆ. ಕೃಷಿಯನ್ನೇ ನಂಬಿಕೊಂಡು ಬದುಕುತ್ತಿದ್ದಾರೆ ಈ ಯುವಕರು. ಆದರೆ ಈ ಯುವಕರಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಕೃಷಿ ಮಾಡುವ ತಮ್ಮ ಗಂಡು ಮಕ್ಕಳಿಗ ಹೆಣ್ಣು ಕೊಡ್ತಿಲ್ಲ ಎಂದು ಪೋಷಕರ ಅಳಲು ಹೊರಹಾಕಿದ್ದು, ಮಾದಪ್ಪನ ಸನ್ನಿಧಿಯ ಮೊರೆಹೋಗಿದ್ದಾರೆ.

ವಿಧವಿಧದ ಹರಕೆಗಳು..! : ಇತ್ತ ದಿನೇ ದಿನೇ ಗಂಡು ಮಕ್ಕಳ ವಯಸ್ಸು ಏರುತ್ತಿದೆ. ಮದುವೆ ವಯಸ್ಸು ಮೀರುತ್ತಿದೆ ಎಂಬ ಆತಂಕ ಪೋಷಕರಿಗೆ ಆರಂಭವಾಗಿದೆ. ಹೀಗಾಗಿ ಚಿನ್ನದ ತೇರು ಎಳೆಸುತ್ತೇವೆ, ಹುಲಿ ವಾಹನ ಎಳೆಸುತ್ತೇವೆ, ಭಿಕ್ಷೆ ಎತ್ತಿ ಹುಂಡಿಗೆ ಹಣ ಹಾಕುತ್ತೇವೆ, ತಮ್ಮ ಶಕ್ತಿ ಇರುವವರೆಗೂ ಪಾದಯಾತ್ರೆ ಮಾಡಿ ನಿನ್ನ ಸೇವೆ ಮಾಡುತ್ತೇವೆ ಎಂದು ಹರಕೆ ಹೊತ್ತು ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಮೊದಲು ಶಿವರಾತ್ರಿ ಹಾಗೂ ದೀಪಾವಳಿ ಸಂದರ್ಭದಲ್ಲಿ ಪಾದಯಾತ್ರೆ ಮಾಡುತ್ತಿದ್ದ ಭಕ್ತರು ಈಗ ವರ್ಷದ ಇನ್ನಿತರ ದಿನಗಳಲ್ಲೂ ಪಾದಯಾತ್ರೆ ಆರಂಭಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

The number of Padayatra For Bride is increasing day by day in the presence of Male Mahadeshwara Betta. Not only the unmarried youths, the parents of the youths are also coming on foot and praying to Mahadeshwan for the marriage luck of their children.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

13 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

20 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

22 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

22 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago