Advertisement
MIRROR FOCUS

ಹೆಚ್ಚುತ್ತಿರುವ ವಾಯುಮಾಲಿನ್ಯ | ಭಾರತೀಯರ ಜೀವಿತಾವಧಿ ಕಡಿಮೆಗೆ ಕಾರಣ..?

Share

ವಾಯುಮಾಲಿನ್ಯ ಹೆಚ್ಚುತ್ತಿರುವ ಕಾರಣದಿಂದ ಭಾರತೀಯರ ಜೀವಿತಾವಧಿ ಕಡಿಮೆಯಾಗುತ್ತಿದೆಯೇ..? ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್‌ ಅಧ್ಯಯನ ವರದಿ  ಪ್ರಕಾರ, ಗಾಳಿಯಲ್ಲಿ ವಿಷಕಾರಿ ಕಣಗಳು ಹೆಚ್ಚುತ್ತಿರುವುದು ಹಾಗೂ  ಇಂತಹ ವಿಷಕಾರಿ ಅಂಶಗಳಿಗೆ ಒಡ್ಡಿಕೊಳ್ಳುವುದರಿಂದ, ಭಾರತೀಯರ ಸರಾಸರಿ ಜೀವಿತಾವಧಿ 3.5 ವರ್ಷಗಳಷ್ಟು ಕಡಿಮೆಯಾಗುತ್ತಿದೆ.  ಸದ್ಯ WHO ಮಾನದಂಡಕ್ಕಿಂತ ಭಾರತೀಯರು ಎಂಟು ಪಟ್ಟು ಹೆಚ್ಚು ಅಪಾಯಕಾರಿ ವಿಷ ಗಾಳಿಯನ್ನು ಉಸಿರಾಡುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಸುರಕ್ಷಿತ ಗಾಳಿಯ ಗುಣಮಟ್ಟದ ಮಟ್ಟಕ್ಕಿಂತ ಎಂಟು ಪಟ್ಟು ಹೆಚ್ಚು ವಿಷಕಾರಿ ಕಣಗಳನ್ನು ಒಳಗೊಂಡಿರುವ ಗಾಳಿಯನ್ನು ಪ್ರತಿಯೊಬ್ಬ ಭಾರತೀಯ ಉಸಿರಾಡುತ್ತಾನೆ ಎಂದು ಈಚೆಗೆ ಬಿಡುಗಡೆಯಾದ ಹೊಸ ವಾಯು ಮಾಲಿನ್ಯ ದತ್ತಾಂಶವು ತಿಳಿಸಿದೆ. ಗಾಳಿಯಲ್ಲಿರುವ ಇಂತಹ ಹೆಚ್ಚಿನ ಮಟ್ಟದ ವಿಷಕಾರಿ ಕಣಗಳಿಗೆ ಒಡ್ಡಿಕೊಳ್ಳುವುದರಿಂದ ಭಾರತೀಯರ ಸರಾಸರಿ ಜೀವಿತಾವಧಿ 3.5 ವರ್ಷಗಳಷ್ಟು ಕಡಿಮೆಯಾಗುತ್ತದೆ. ಹೆಚ್ಚು ಮಾಲಿನ್ಯಕಾರಕ ಪ್ರದೇಶಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿಇದೆ. ಇದರರ್ಥ ದೆಹಲಿಯ ಪ್ರತಿ ನಿವಾಸಿಗೆ 8.2 ವರ್ಷಗಳ ಜೀವಿತಾವಧಿಯ ನಷ್ಟವಾಗುತ್ತದೆ.

ಉತ್ತರದ ಬಯಲು ಪ್ರದೇಶಗಳಿಗೆ ಹೋಲಿಸಿದರೆ, ದಕ್ಷಿಣ ಭಾರತ ತುಲನಾತ್ಮಕವಾಗಿ ಉತ್ತಮವಾಗಿದೆ. ಆದರೆ, ವಾಯು ಮಾಲಿನ್ಯದ ಮಟ್ಟವನ್ನು ಡಬ್ಲ್ಯುಎಚ್‌ಒ ಮಾನದಂಡಕ್ಕೆ ಇಳಿಸುವುದರಿಂದ ಕರ್ನಾಟಕದ ಪ್ರತಿಯೊಬ್ಬರ ಜೀವಿತಾವಧಿಯು 1.6 ವರ್ಷಗಳು, ಆಂಧ್ರಪ್ರದೇಶದಲ್ಲಿ 2.1 ವರ್ಷಗಳು, ತೆಲಂಗಾಣದಲ್ಲಿ 2.4 ವರ್ಷಗಳು, ತಮಿಳುನಾಡಿನಲ್ಲಿ 1.7, ತಮಿಳುನಾಡಿನಲ್ಲಿ 1.7 ವರ್ಷಗಳು ಮತ್ತು ಕೇರಳದಲ್ಲಿ 1.3 ವರ್ಷಗಳು ಹೆಚ್ಚಾಗುತ್ತದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ನೇತೃತ್ವದ ಜಾಗತಿಕ ತಂಡವು ರಚಿಸಿದ ವಾಯು ಗುಣಮಟ್ಟ ಜೀವನ ಸೂಚ್ಯಂಕ ಹೇಳುತ್ತದೆ.

ಹಿಂದಿನಿಂದಲೂ ಹಲವಾರು ಅಧ್ಯಯನಗಳು ಗಾಳಿಯ ಗುಣಮಟ್ಟ ಮತ್ತು ಮರಣದ ನಡುವಿನ ಸಂಬಂಧವನ್ನು ತೋರಿಸಿವೆ. ಕಳೆದ ಡಿಸೆಂಬರ್‌ನಲ್ಲಿ ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್‌ನಲ್ಲಿ ನಡೆದ ಅಂತಹ ಒಂದು ಅಧ್ಯಯನದ ಪ್ರಕಾರ, ವಾರ್ಷಿಕ ಕನಿಷ್ಠ ಮಟ್ಟದ ಒಡ್ಡಿಕೊಳ್ಳುವಿಕೆಯು ಭಾರತದಲ್ಲಿ ಒಂದು ವರ್ಷದಲ್ಲಿ ಅಂದಾಜು 15 ಲಕ್ಷ ಸಾವುಗಳಿಗೆ ಕಾರಣವಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

30 minutes ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

12 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

13 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

20 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

21 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago