ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

February 24, 2025
12:14 PM

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದುಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

Advertisement

ಬಾಹ್ಯಾಕಾಶ, ಕೃತಕ ಬುದ್ಧಿಮತ್ತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯುವ ಪೀಳಿಗೆಯ ಹೆಚ್ಚುತ್ತಿರುವ ಪಾಲ್ಗೊಳ್ಳುವಿಕೆ, ದೇಶದಲ್ಲಿ ಹೊಸ ಕ್ರಾಂತಿಯನ್ನುಂಟು ಮಾಡಿದೆ. ಆದರೆ ಜೀವನದಲ್ಲಿ ಕ್ರೀಡೆಯ ಮಹತ್ವವೂ ಅಗತ್ಯ ಇದೆ. ದೈಹಿಕ ವ್ಯಾಯಾಮಗಳೂ ಅಗತ್ಯ ಎಂದ ಪ್ರಧಾನಿ, ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದರು. ಈ ಸಮಸ್ಯೆಯನ್ನು ಎದುರಿಸಲು ಒಂದು ಉಪಯುಕ್ತ ವಿಧಾನದ ಸಲಹೆ ನೀಡಿದ ಅವರು, ಅಡುಗೆಗೆ ಎಣ್ಣೆಯ ಬಳಕೆಯನ್ನು ಶೇಕಡಾ 10ರಷ್ಟು ಕಡಿಮೆ ಮಾಡುವ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಬಳಿಕ ಪ್ರಧಾನಿ, ಸ್ಥೂಲಕಾಯತೆಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಆರೋಗ್ಯಪೂರ್ಣ ಬದುಕು ಸಾಗಿಸುವ ಕುರಿತಂತೆ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ, ಖ್ಯಾತ ಅಥ್ಲೀಟ್ ನಿಖತ್ ಜರೀನ್, ಬೆಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ನೀಡಿರುವ ಸಲಹೆಗಳ ಧ್ವನಿ ಮುದ್ರಣಗಳನ್ನು ಕೇಳುಗರಿಗೆ ಪ್ರಸ್ತುತಪಡಿಸಿದರು.

ದೇವಿ ಶೆಟ್ಟಿ ಮಾತನಾಡಿ, ಯುವಜನತೆ ಆದಷ್ಟು ವ್ಯಾಯಾಮಗಳನ್ನು ಮಾಡುವಂತೆ ಸಲಹೆ ನೀಡಿದ್ದಾರೆ. ಆದಷ್ಟು ಆಹಾರ ಪದ್ಧತಿಯಲ್ಲಿ ಅನ್ನ, ಚಪಾತಿ, ಸಕ್ಕರೆ ಪ್ರಮಾಣ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror