ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದುಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಬಾಹ್ಯಾಕಾಶ, ಕೃತಕ ಬುದ್ಧಿಮತ್ತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯುವ ಪೀಳಿಗೆಯ ಹೆಚ್ಚುತ್ತಿರುವ ಪಾಲ್ಗೊಳ್ಳುವಿಕೆ, ದೇಶದಲ್ಲಿ ಹೊಸ ಕ್ರಾಂತಿಯನ್ನುಂಟು ಮಾಡಿದೆ. ಆದರೆ ಜೀವನದಲ್ಲಿ ಕ್ರೀಡೆಯ ಮಹತ್ವವೂ ಅಗತ್ಯ ಇದೆ. ದೈಹಿಕ ವ್ಯಾಯಾಮಗಳೂ ಅಗತ್ಯ ಎಂದ ಪ್ರಧಾನಿ, ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದರು. ಈ ಸಮಸ್ಯೆಯನ್ನು ಎದುರಿಸಲು ಒಂದು ಉಪಯುಕ್ತ ವಿಧಾನದ ಸಲಹೆ ನೀಡಿದ ಅವರು, ಅಡುಗೆಗೆ ಎಣ್ಣೆಯ ಬಳಕೆಯನ್ನು ಶೇಕಡಾ 10ರಷ್ಟು ಕಡಿಮೆ ಮಾಡುವ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬಳಿಕ ಪ್ರಧಾನಿ, ಸ್ಥೂಲಕಾಯತೆಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಆರೋಗ್ಯಪೂರ್ಣ ಬದುಕು ಸಾಗಿಸುವ ಕುರಿತಂತೆ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ, ಖ್ಯಾತ ಅಥ್ಲೀಟ್ ನಿಖತ್ ಜರೀನ್, ಬೆಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ನೀಡಿರುವ ಸಲಹೆಗಳ ಧ್ವನಿ ಮುದ್ರಣಗಳನ್ನು ಕೇಳುಗರಿಗೆ ಪ್ರಸ್ತುತಪಡಿಸಿದರು.
ದೇವಿ ಶೆಟ್ಟಿ ಮಾತನಾಡಿ, ಯುವಜನತೆ ಆದಷ್ಟು ವ್ಯಾಯಾಮಗಳನ್ನು ಮಾಡುವಂತೆ ಸಲಹೆ ನೀಡಿದ್ದಾರೆ. ಆದಷ್ಟು ಆಹಾರ ಪದ್ಧತಿಯಲ್ಲಿ ಅನ್ನ, ಚಪಾತಿ, ಸಕ್ಕರೆ ಪ್ರಮಾಣ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…