Advertisement
MIRROR FOCUS

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

Share

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದುಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಬಾಹ್ಯಾಕಾಶ, ಕೃತಕ ಬುದ್ಧಿಮತ್ತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯುವ ಪೀಳಿಗೆಯ ಹೆಚ್ಚುತ್ತಿರುವ ಪಾಲ್ಗೊಳ್ಳುವಿಕೆ, ದೇಶದಲ್ಲಿ ಹೊಸ ಕ್ರಾಂತಿಯನ್ನುಂಟು ಮಾಡಿದೆ. ಆದರೆ ಜೀವನದಲ್ಲಿ ಕ್ರೀಡೆಯ ಮಹತ್ವವೂ ಅಗತ್ಯ ಇದೆ. ದೈಹಿಕ ವ್ಯಾಯಾಮಗಳೂ ಅಗತ್ಯ ಎಂದ ಪ್ರಧಾನಿ, ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದರು. ಈ ಸಮಸ್ಯೆಯನ್ನು ಎದುರಿಸಲು ಒಂದು ಉಪಯುಕ್ತ ವಿಧಾನದ ಸಲಹೆ ನೀಡಿದ ಅವರು, ಅಡುಗೆಗೆ ಎಣ್ಣೆಯ ಬಳಕೆಯನ್ನು ಶೇಕಡಾ 10ರಷ್ಟು ಕಡಿಮೆ ಮಾಡುವ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಬಳಿಕ ಪ್ರಧಾನಿ, ಸ್ಥೂಲಕಾಯತೆಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಆರೋಗ್ಯಪೂರ್ಣ ಬದುಕು ಸಾಗಿಸುವ ಕುರಿತಂತೆ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ, ಖ್ಯಾತ ಅಥ್ಲೀಟ್ ನಿಖತ್ ಜರೀನ್, ಬೆಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ನೀಡಿರುವ ಸಲಹೆಗಳ ಧ್ವನಿ ಮುದ್ರಣಗಳನ್ನು ಕೇಳುಗರಿಗೆ ಪ್ರಸ್ತುತಪಡಿಸಿದರು.

ದೇವಿ ಶೆಟ್ಟಿ ಮಾತನಾಡಿ, ಯುವಜನತೆ ಆದಷ್ಟು ವ್ಯಾಯಾಮಗಳನ್ನು ಮಾಡುವಂತೆ ಸಲಹೆ ನೀಡಿದ್ದಾರೆ. ಆದಷ್ಟು ಆಹಾರ ಪದ್ಧತಿಯಲ್ಲಿ ಅನ್ನ, ಚಪಾತಿ, ಸಕ್ಕರೆ ಪ್ರಮಾಣ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

8 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

14 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

14 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago