ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿದ ಭಾರತ; 109 ರನ್ಗಳಿಗೆ ಆಲೌಟ್

March 1, 2023
5:23 PM

ಇಂದೋರ್​ನಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 109 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.

ಇಂದೋರ್​ನಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ  ನಡುವಿನ 3ನೇ ಟೆಸ್ಟ್‍ ಪಂದ್ಯದಲ್ಲಿ ಟೀಂ ಇಂಡಿಯಾ  ಕೇವಲ 109 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ಟೀಂ ಇಂಡಿಯಾ ನಾಯಕನ ನಿರ್ಧಾರ ತಪ್ಪು ಎಂದು ಸಾಭೀತುಪಡಿಸಿದ ಆಸೀಸ್ ಬೌಲಿಂಗ್ ವಿಭಾಗ ರೋಹಿತ್ ಬಳಗವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ.

Advertisement

ಅದರಲ್ಲೂ ಟೀಂ ಇಂಡಿಯಾ ಪರ ಉರುಳಿದ ಅಷ್ಟೂ ವಿಕೆಟ್​ಗಳನ್ನು ಆಸೀಸ್​ನ ಸ್ಪಿನ್​ ವಿಭಾಗ ಕಬಳಿಸಿದ್ದು ವಿಶೇಷವಾಗಿತ್ತು. ಆಸೀಸ್ ಪರ ಮ್ಯಾಥ್ಯೂ ಕುಹ್ನೆಮನ್ 5 ವಿಕೆಟ್ ಪಡೆದರೆ, ನಾಥನ್ ಲಿಯಾನ್ 3 ವಿಕೆಟ್ ಹಾಗೂ ಟಾಡ್ ಮರ್ಫಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತದ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ನೀಡಲು ಮುಂದಾದರು. ಆದರೆ 27 ರನ್​ಗಳಿಸುವುದರೊಳಗೆ ಈ ಜೋಡಿ ಬೇರ್ಪಟಿತು. ಬಿಗ್ ಶಾಟ್ ಆಡುವ ಯತ್ನದಲ್ಲಿ ನಾಯಕ ರೋಹಿತ್ ಸ್ಟಂಪ್ ಔಟ್ ಆದರು. ಬಳಿಕ ರನ್ ಖಾತೆಗೆ 7 ರನ್ ಸೇರಿಸುವುದರೊಳಗೆ ಮತ್ತೊಬ್ಬ ಆರಂಭಿಕ ಗಿಲ್ ಕೂಡ ಪೆವಿಲಿಯನ್ ಸೇರಿಕೊಂಡರು. ಬಳಿಕ ಬಂದ ಚೇತೇಶ್ವರ್ ಪೂಜಾರ ಕೂಡ ಕೇವಲ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್

ಇನ್ನು ಬ್ಯಾಟಿಂಗ್​ನಲ್ಲಿ ಮುಂಬಡ್ತಿ ಪಡೆದು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ರವೀಂದ್ರ ಜಡೇಜಾ ಕೂಡ ಒಂದು ಬೌಂಡರಿ ಬಾರಿಸಿದ ಬಳಿಕ ಔಟಾದರು. ಹೀಗಾಗಿ ಟೀಂ ಇಂಡಿಯಾ 50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್ ಕಳೆದುಕೊಂಡಿತು. ಜಡೇಜಾ ವಿಕೆಟ್ ಬಳಿಕ ಬಂದ ಶ್ರೇಯಸ್ ಅಯ್ಯರ್ ಕೂಡ ಖಾತೆ ತೆರೆಯದೆ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಒಂದೆಡೆ ವಿಕೆಟ್ ಉರುಳುತ್ತಿದ್ದರು ಕೊಂಚ ಪ್ರತಿರೋಧ ತೋರಿದ ವಿರಾಟ್ ಕೊಹ್ಲಿ ತಂಡದ ಪರ ಅತ್ಯಧಿಕ ರನ್ ಅಂದರೆ 22 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನು ಕೆಎಸ್​ ಭರತ್ 17 ರನ್​ಗಳಿಗೆ ಸುಸ್ತಾದರೆ, ಅಶ್ವಿನ್ 3 ರನ್ ಬಾರಿಸಿದರು. ಅಂತಿಮವಾಗಿ 2 ಭರ್ಜರಿ ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿ, ಸ್ಫೋಟಕ ಆಟಕ್ಕೆ ಮುಂದಾಗಿದ್ದ ಉಮೇಶ್ ಯಾದವ್ ಕೂಡ 17 ರನ್​ಗೆ ಎಲ್​ಬಿ ಬಲೆಗೆ ಬಿದ್ದರು. ಅಂತಿಮವಾಗಿ ರನ್​ಔಟ್ ಆಗುವ ಮೂಲಕ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು
May 8, 2025
7:21 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ
May 8, 2025
6:54 AM
by: ದ ರೂರಲ್ ಮಿರರ್.ಕಾಂ
ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
May 7, 2025
10:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ
May 7, 2025
2:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group