ಸುದ್ದಿಗಳು

ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿದ ಭಾರತ; 109 ರನ್ಗಳಿಗೆ ಆಲೌಟ್

Share

ಇಂದೋರ್​ನಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 109 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.

ಇಂದೋರ್​ನಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ  ನಡುವಿನ 3ನೇ ಟೆಸ್ಟ್‍ ಪಂದ್ಯದಲ್ಲಿ ಟೀಂ ಇಂಡಿಯಾ  ಕೇವಲ 109 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ಟೀಂ ಇಂಡಿಯಾ ನಾಯಕನ ನಿರ್ಧಾರ ತಪ್ಪು ಎಂದು ಸಾಭೀತುಪಡಿಸಿದ ಆಸೀಸ್ ಬೌಲಿಂಗ್ ವಿಭಾಗ ರೋಹಿತ್ ಬಳಗವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ.

ಅದರಲ್ಲೂ ಟೀಂ ಇಂಡಿಯಾ ಪರ ಉರುಳಿದ ಅಷ್ಟೂ ವಿಕೆಟ್​ಗಳನ್ನು ಆಸೀಸ್​ನ ಸ್ಪಿನ್​ ವಿಭಾಗ ಕಬಳಿಸಿದ್ದು ವಿಶೇಷವಾಗಿತ್ತು. ಆಸೀಸ್ ಪರ ಮ್ಯಾಥ್ಯೂ ಕುಹ್ನೆಮನ್ 5 ವಿಕೆಟ್ ಪಡೆದರೆ, ನಾಥನ್ ಲಿಯಾನ್ 3 ವಿಕೆಟ್ ಹಾಗೂ ಟಾಡ್ ಮರ್ಫಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತದ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ನೀಡಲು ಮುಂದಾದರು. ಆದರೆ 27 ರನ್​ಗಳಿಸುವುದರೊಳಗೆ ಈ ಜೋಡಿ ಬೇರ್ಪಟಿತು. ಬಿಗ್ ಶಾಟ್ ಆಡುವ ಯತ್ನದಲ್ಲಿ ನಾಯಕ ರೋಹಿತ್ ಸ್ಟಂಪ್ ಔಟ್ ಆದರು. ಬಳಿಕ ರನ್ ಖಾತೆಗೆ 7 ರನ್ ಸೇರಿಸುವುದರೊಳಗೆ ಮತ್ತೊಬ್ಬ ಆರಂಭಿಕ ಗಿಲ್ ಕೂಡ ಪೆವಿಲಿಯನ್ ಸೇರಿಕೊಂಡರು. ಬಳಿಕ ಬಂದ ಚೇತೇಶ್ವರ್ ಪೂಜಾರ ಕೂಡ ಕೇವಲ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್

ಇನ್ನು ಬ್ಯಾಟಿಂಗ್​ನಲ್ಲಿ ಮುಂಬಡ್ತಿ ಪಡೆದು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ರವೀಂದ್ರ ಜಡೇಜಾ ಕೂಡ ಒಂದು ಬೌಂಡರಿ ಬಾರಿಸಿದ ಬಳಿಕ ಔಟಾದರು. ಹೀಗಾಗಿ ಟೀಂ ಇಂಡಿಯಾ 50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್ ಕಳೆದುಕೊಂಡಿತು. ಜಡೇಜಾ ವಿಕೆಟ್ ಬಳಿಕ ಬಂದ ಶ್ರೇಯಸ್ ಅಯ್ಯರ್ ಕೂಡ ಖಾತೆ ತೆರೆಯದೆ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಒಂದೆಡೆ ವಿಕೆಟ್ ಉರುಳುತ್ತಿದ್ದರು ಕೊಂಚ ಪ್ರತಿರೋಧ ತೋರಿದ ವಿರಾಟ್ ಕೊಹ್ಲಿ ತಂಡದ ಪರ ಅತ್ಯಧಿಕ ರನ್ ಅಂದರೆ 22 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನು ಕೆಎಸ್​ ಭರತ್ 17 ರನ್​ಗಳಿಗೆ ಸುಸ್ತಾದರೆ, ಅಶ್ವಿನ್ 3 ರನ್ ಬಾರಿಸಿದರು. ಅಂತಿಮವಾಗಿ 2 ಭರ್ಜರಿ ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿ, ಸ್ಫೋಟಕ ಆಟಕ್ಕೆ ಮುಂದಾಗಿದ್ದ ಉಮೇಶ್ ಯಾದವ್ ಕೂಡ 17 ರನ್​ಗೆ ಎಲ್​ಬಿ ಬಲೆಗೆ ಬಿದ್ದರು. ಅಂತಿಮವಾಗಿ ರನ್​ಔಟ್ ಆಗುವ ಮೂಲಕ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಏಪ್ರಿಲ್‌ನಲ್ಲಿ ಶನಿ ತನ್ನದೇ ನಕ್ಷತ್ರದಲ್ಲಿ (ಕನ್ಯಾ ರಾಶಿ) ಪ್ರವೇಶ | 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 minutes ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

9 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

9 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

24 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

1 day ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

1 day ago