ಮೊಗ್ರ ಸ್ವಾತಂತ್ರ್ಯ ದಿನಾಚರಣೆ | ಮಹಿಳೆಯಿಂದ ಧ್ವಜವಂದನೆ – ವೈರಲ್‌ ಆದ ಫೋಟೊ |

August 15, 2021
9:34 PM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ ಗಾಂಧಿ ವಿಚಾರ ವೇದಿಕೆ ವತಿಯಿಂದ  ಸ್ವಾತಂತ್ರ್ಯ ದಿನಾಚರಣೆ ನಡೆದಿತ್ತು. ಈ ಕಾರ್ಯಕ್ರಮದ ಬಳಿಕ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು ಧ್ವಜವಂದನೆ ಮಾಡಿದರು, ಇದೀಗ ಈ ಫೋಟೋ ವೈರಲ್‌ ಆಗಿದೆ. 

Advertisement
Advertisement

ಗಾಂಧಿ ವಿಚಾರ ವೇದಿಕೆ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ  ಪ್ರಮುಖರು ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು. ಬೆಳಗ್ಗೆ 9  ಗಂಟೆಗೆ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಮುಗಿದ ಬಳಿಕ ಅತಿಥಿಗಳು ತೆರಳಿದ್ದರು. ಕಾರ್ಯಕ್ರಮ ಸಂಘಟಿಸಿದ ಕೆಲ ಮಂದಿ ಸ್ಥಳದಲ್ಲಿ  ಮಾತುಕತೆ ನಡೆಸುತ್ತಿದ್ದರು. ಈ ಸಂದರ್ಭ ಕೆಲಸದ ಕತ್ತಿ ಸಹಿತವಾಗಿಯೇ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಪರಮೇಶ್ವರಿ ಅವರು ನೇರವಾಗಿ ಆಗಮಿಸಿ ಚಪ್ಪಲಿ ತೆಗೆದು ಧ್ವಜವಂದನೆ ಮಾಡಿ ತೆರಳಿದರು. ಈ ಫೋಟೊವನ್ನು ದೂರದಿಂದ ಗಾಂಧಿ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಲಕ್ಷ್ಮೀಶ ಗಬ್ಲಡ್ಕ ಅವರು ಕ್ಲಿಕ್ಕಿಸಿದ್ದರು, ಬಳಿಕ ತಮ್ಮ ವೇದಿಕೆಯಲ್ಲಿ  ಹಂಚಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮೀಶ ಗಬ್ಲಡ್ಕ, ” ಇದು ಗ್ರಾಮೀಣ ಭಾರತ”  ಎಂದು ವ್ಯಾಖ್ಯಾನಿಸಿದರು. ಧ್ವಜಾರೋಹಣದ ನಂತರ ಗ್ರಾಮ ಪಂಚಾಯತ್ ಸದಸ್ಯರುಗಳು ಕೂಡಾ ಆಗಮಿಸಿ ಧ್ವಜ ವಂದನೆ ಸಲ್ಲಿಸಿ ತೆರಳಿದ್ದರು.

ಮೊಗ್ರ ಪ್ರದೇಶವು ಕಳೆದ ಕೆಲವು ಸಮಯಗಳಿಂದ ಸುದ್ದಿಯಾಗಿದೆ. ಈ ಹಿಂದೆ ನೆಟ್ವರ್ಕ್‌ ಸಮಸ್ಯೆಯಿಂದ ವಿದ್ಯಾರ್ಥಿನಿಯೊಬ್ಬಳು ತಂದೆ ಕೊಡೆ ಹಿಡಿದು ಓದುತ್ತಿದ್ದ ಫೋಟೊ ದೇಶದಾದ್ಯಂತ ವೈರಲ್‌ ಆಗಿತ್ತು, ಅದಾದ ಬಳಿಕ ಗ್ರಾಮಸ್ಥರೇ ನಿರ್ಮಿಸಿದ “ಗ್ರಾಮಸೇತು” ಕೂಡಾ ದೇಶ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು  ಆಗಮಿಸಿ ಧ್ವಜ ವಂದನೆ ಮಾಡಿರುವುದು  ಕೂಡಾ ರಾಜ್ಯಾದ್ಯಂತ ಸದ್ದು ಮಾಡಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ
May 24, 2025
11:10 AM
by: ದ ರೂರಲ್ ಮಿರರ್.ಕಾಂ
50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18
May 24, 2025
10:37 AM
by: The Rural Mirror ಸುದ್ದಿಜಾಲ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?
May 24, 2025
9:13 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group