ಸ್ವಾತಂತ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ಗ್ರಾಮ ವಿಕಾಸ ಸಮಿತಿ ಬಳ್ಪ -ಕೇನ್ಯ ಇದರ ವತಿಯಿಂದ ಬಳ್ಪ ಪರಿಸರದ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪರಿಸರದ ಪ್ಲಾಸ್ಟಿಕ್ ಹೆಕ್ಕುವ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೀಗೆ ಹೆಕ್ಕಿದ ಪ್ಲಾಸ್ಟಿಕ್ 300 ಕೆಜಿ…!.
ಗ್ರಾಮ ವಿಕಾಸ ಸಮಿತಿ ವತಿಯಿಂದ ಬಳ್ಪ, ಬೀದಿಗುಡ್ಡೆ ಸಂಪ್ಯಾಡಿ,ಎಣ್ಣೆಮಜಲು,ಕೇನ್ಯ, ಪೇರಳಕಟ್ಟೆ ಶಾಲೆಯ ವಿದ್ಯಾರ್ಥಿಗಳು ಅವರ ಪರಿಸರದ ಪ್ರದೇಶದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಸಂಗ್ರಹಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅತೀ ಹೆಚ್ಚು ಸಂಗ್ರಹಿಸಿದವರಿಗೆ ಪುಸ್ತಕ ಬಹುಮಾನ ನೀಡಲಾಯಿತು. ಒಟ್ಟು ಸುಮಾರು 300 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹವಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದೊಂದಿಗೆ ಸ್ವಚ್ಛ ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ವಿನೋದ್ ಬೊಳ್ಮಲೆ, ಸದಸ್ಯರು ಪಾಲ್ಗೊಂಡಿದ್ದರು.ಶಿಕ್ಷಕರು, ಪೋಷಕರು ಸಹರಿಸಿದರು.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…