ಸ್ವಾತಂತ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ಗ್ರಾಮ ವಿಕಾಸ ಸಮಿತಿ ಬಳ್ಪ -ಕೇನ್ಯ ಇದರ ವತಿಯಿಂದ ಬಳ್ಪ ಪರಿಸರದ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪರಿಸರದ ಪ್ಲಾಸ್ಟಿಕ್ ಹೆಕ್ಕುವ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೀಗೆ ಹೆಕ್ಕಿದ ಪ್ಲಾಸ್ಟಿಕ್ 300 ಕೆಜಿ…!.
ಗ್ರಾಮ ವಿಕಾಸ ಸಮಿತಿ ವತಿಯಿಂದ ಬಳ್ಪ, ಬೀದಿಗುಡ್ಡೆ ಸಂಪ್ಯಾಡಿ,ಎಣ್ಣೆಮಜಲು,ಕೇನ್ಯ, ಪೇರಳಕಟ್ಟೆ ಶಾಲೆಯ ವಿದ್ಯಾರ್ಥಿಗಳು ಅವರ ಪರಿಸರದ ಪ್ರದೇಶದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಸಂಗ್ರಹಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅತೀ ಹೆಚ್ಚು ಸಂಗ್ರಹಿಸಿದವರಿಗೆ ಪುಸ್ತಕ ಬಹುಮಾನ ನೀಡಲಾಯಿತು. ಒಟ್ಟು ಸುಮಾರು 300 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹವಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದೊಂದಿಗೆ ಸ್ವಚ್ಛ ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ವಿನೋದ್ ಬೊಳ್ಮಲೆ, ಸದಸ್ಯರು ಪಾಲ್ಗೊಂಡಿದ್ದರು.ಶಿಕ್ಷಕರು, ಪೋಷಕರು ಸಹರಿಸಿದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…