ಸ್ವಾತಂತ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ಗ್ರಾಮ ವಿಕಾಸ ಸಮಿತಿ ಬಳ್ಪ -ಕೇನ್ಯ ಇದರ ವತಿಯಿಂದ ಬಳ್ಪ ಪರಿಸರದ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪರಿಸರದ ಪ್ಲಾಸ್ಟಿಕ್ ಹೆಕ್ಕುವ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೀಗೆ ಹೆಕ್ಕಿದ ಪ್ಲಾಸ್ಟಿಕ್ 300 ಕೆಜಿ…!.
ಗ್ರಾಮ ವಿಕಾಸ ಸಮಿತಿ ವತಿಯಿಂದ ಬಳ್ಪ, ಬೀದಿಗುಡ್ಡೆ ಸಂಪ್ಯಾಡಿ,ಎಣ್ಣೆಮಜಲು,ಕೇನ್ಯ, ಪೇರಳಕಟ್ಟೆ ಶಾಲೆಯ ವಿದ್ಯಾರ್ಥಿಗಳು ಅವರ ಪರಿಸರದ ಪ್ರದೇಶದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಸಂಗ್ರಹಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅತೀ ಹೆಚ್ಚು ಸಂಗ್ರಹಿಸಿದವರಿಗೆ ಪುಸ್ತಕ ಬಹುಮಾನ ನೀಡಲಾಯಿತು. ಒಟ್ಟು ಸುಮಾರು 300 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹವಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದೊಂದಿಗೆ ಸ್ವಚ್ಛ ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ವಿನೋದ್ ಬೊಳ್ಮಲೆ, ಸದಸ್ಯರು ಪಾಲ್ಗೊಂಡಿದ್ದರು.ಶಿಕ್ಷಕರು, ಪೋಷಕರು ಸಹರಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…