ಸ್ವಾತಂತ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ಗ್ರಾಮ ವಿಕಾಸ ಸಮಿತಿ ಬಳ್ಪ -ಕೇನ್ಯ ಇದರ ವತಿಯಿಂದ ಬಳ್ಪ ಪರಿಸರದ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪರಿಸರದ ಪ್ಲಾಸ್ಟಿಕ್ ಹೆಕ್ಕುವ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೀಗೆ ಹೆಕ್ಕಿದ ಪ್ಲಾಸ್ಟಿಕ್ 300 ಕೆಜಿ…!.
ಗ್ರಾಮ ವಿಕಾಸ ಸಮಿತಿ ವತಿಯಿಂದ ಬಳ್ಪ, ಬೀದಿಗುಡ್ಡೆ ಸಂಪ್ಯಾಡಿ,ಎಣ್ಣೆಮಜಲು,ಕೇನ್ಯ, ಪೇರಳಕಟ್ಟೆ ಶಾಲೆಯ ವಿದ್ಯಾರ್ಥಿಗಳು ಅವರ ಪರಿಸರದ ಪ್ರದೇಶದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಸಂಗ್ರಹಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅತೀ ಹೆಚ್ಚು ಸಂಗ್ರಹಿಸಿದವರಿಗೆ ಪುಸ್ತಕ ಬಹುಮಾನ ನೀಡಲಾಯಿತು. ಒಟ್ಟು ಸುಮಾರು 300 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹವಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದೊಂದಿಗೆ ಸ್ವಚ್ಛ ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ವಿನೋದ್ ಬೊಳ್ಮಲೆ, ಸದಸ್ಯರು ಪಾಲ್ಗೊಂಡಿದ್ದರು.ಶಿಕ್ಷಕರು, ಪೋಷಕರು ಸಹರಿಸಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…