ಸ್ವಾತಂತ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ಗ್ರಾಮ ವಿಕಾಸ ಸಮಿತಿ ಬಳ್ಪ -ಕೇನ್ಯ ಇದರ ವತಿಯಿಂದ ಬಳ್ಪ ಪರಿಸರದ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪರಿಸರದ ಪ್ಲಾಸ್ಟಿಕ್ ಹೆಕ್ಕುವ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೀಗೆ ಹೆಕ್ಕಿದ ಪ್ಲಾಸ್ಟಿಕ್ 300 ಕೆಜಿ…!.
ಗ್ರಾಮ ವಿಕಾಸ ಸಮಿತಿ ವತಿಯಿಂದ ಬಳ್ಪ, ಬೀದಿಗುಡ್ಡೆ ಸಂಪ್ಯಾಡಿ,ಎಣ್ಣೆಮಜಲು,ಕೇನ್ಯ, ಪೇರಳಕಟ್ಟೆ ಶಾಲೆಯ ವಿದ್ಯಾರ್ಥಿಗಳು ಅವರ ಪರಿಸರದ ಪ್ರದೇಶದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಸಂಗ್ರಹಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅತೀ ಹೆಚ್ಚು ಸಂಗ್ರಹಿಸಿದವರಿಗೆ ಪುಸ್ತಕ ಬಹುಮಾನ ನೀಡಲಾಯಿತು. ಒಟ್ಟು ಸುಮಾರು 300 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹವಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದೊಂದಿಗೆ ಸ್ವಚ್ಛ ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ವಿನೋದ್ ಬೊಳ್ಮಲೆ, ಸದಸ್ಯರು ಪಾಲ್ಗೊಂಡಿದ್ದರು.ಶಿಕ್ಷಕರು, ಪೋಷಕರು ಸಹರಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…