Advertisement
ಸುದ್ದಿಗಳು

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

Share

2030ರ ವೇಳೆಗೆ ಭಾರತ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ  ಹೇಳಿದ್ದಾರೆ.

ದೆಹಲಿಯಲ್ಲಿ  ನಡೆದ ಕೇಂದ್ರ ಉಗ್ರಾಣದ 70ನೇ ಸಂಸ್ಥಾಪನಾ ದಿನದ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಮೂರನೇ ಅತಿ ದೊಡ್ಡ ಆರ್ಥಿಕತೆಯ ರಾಷ್ಟ್ರವಾಗುವತ್ತ ವೇಗವಾಗಿ ಸಾಗುತ್ತಿದೆ ಎಂದು ತಿಳಿಸಿದರು.

ಕಳೆದ ಹತ್ತು-ಹನ್ನೆರಡು ವರ್ಷಗಳ ಹಿಂದೆ ದೇಶದ ಆರ್ಥಿಕತೆ ಸುಮಾರು ಎರಡು ಟ್ರಿಲಿಯನ್ ಡಾಲರ್ ಮಟ್ಟದಲ್ಲಿತ್ತು. ಈಗ ಅದು ನಾಲ್ಕು ಟ್ರಿಲಿಯನ್ ಸನಿಹದಲ್ಲಿದ್ದು, 2027ರ ವೇಳೆಗೆ 5 ಟ್ರಿಲಿಯನ್ ತಲುಪಲಿದೆ. 2030ರ ವೇಳೆಗೆ 5 ಟ್ರಿಲಿಯನ್ ಮೀರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ ಈಗ ವಿಶ್ವಾಸ, ಭರವಸೆ ಮತ್ತು ಅವಕಾಶಗಳ ನಿರ್ಣಾಯಕ ಹಂತದಲ್ಲಿ ನಿಂತಿದೆ. ಆರ್ಥಿಕ ಸುಧಾರಣೆಗಳು, ದಕ್ಷ ಆಡಳಿತ ಮತ್ತು ವೇಗದ ಅಭಿವೃದ್ಧಿ ದೇಶವನ್ನು ಜಾಗತಿಕ ವೇದಿಕೆಯಲ್ಲಿ ಮುಂಚೂಣಿಗೆ ತರುತ್ತಿವೆ ಎಂದು ಹೇಳಿದರು.

ಕೇಂದ್ರ ಉಗ್ರಾಣ ನಿಗಮವು ಆರ್ಥಿಕ ಸಾಧನೆಯಲ್ಲಿ ದಾಖಲೆ ನಿರ್ಮಿಸಿದ್ದು, ಸರಕು ಸಂಗ್ರಹ ಮತ್ತು ಗೋದಾಮು ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದೆ. ವಹಿವಾಟು ಮತ್ತು ಲಾಭದಲ್ಲಿ ಹಿಂದಿನ ಮಾನದಂಡಗಳನ್ನು ಮೀರಿ ಮುನ್ನಡೆಯುತ್ತಿದೆ ಎಂದು ಸಚಿವರು ಹೇಳಿದರು.

Union Minister Pralhad Joshi stated that India is on track to cross the 5 trillion dollar economy mark by 2030. Speaking at the 70th Foundation Day of the Central Warehousing Corporation in Delhi, he highlighted India’s rapid economic growth under Prime Minister Narendra Modi’s leadership and emphasized the corporation’s contribution to strengthening the logistics and storage sector.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

2 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

3 hours ago

ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ

ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…

14 hours ago

ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್‌ 3 ರವರೆಗೆ ಮಳೆಯ ಸಾಧ್ಯತೆ…

21 hours ago

ಜಲಾಶಯ ಪಕ್ಕದಲ್ಲೇ ಟ್ಯಾಂಕರ್ ನೀರು | ಅಡಿಕೆ ತೋಟ ಉಳಿಸಿಕೊಳ್ಳಲು ರೈತರ ಹೋರಾಟ

ವಾಣಿ ವಿಲಾಸ ಸಾಗರ ಜಲಾಶಯದ ಸಮೀಪದಲ್ಲೇ ಹಿರಿಯೂರಿನ ಅಡಿಕೆ ರೈತರು ನೀರಿನ ಕೊರತೆಯಿಂದ…

22 hours ago

ಮಾನವ–ವನ್ಯಜೀವಿ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ

ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಪ್ರಾಣಿ–ಮಾನವ ಸಂಘರ್ಷ ಸಮಸ್ಯೆಗೆ…

1 day ago