Advertisement
ಸುದ್ದಿಗಳು

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

Share

2030ರ ವೇಳೆಗೆ ಭಾರತ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ  ಹೇಳಿದ್ದಾರೆ.

ದೆಹಲಿಯಲ್ಲಿ  ನಡೆದ ಕೇಂದ್ರ ಉಗ್ರಾಣದ 70ನೇ ಸಂಸ್ಥಾಪನಾ ದಿನದ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಮೂರನೇ ಅತಿ ದೊಡ್ಡ ಆರ್ಥಿಕತೆಯ ರಾಷ್ಟ್ರವಾಗುವತ್ತ ವೇಗವಾಗಿ ಸಾಗುತ್ತಿದೆ ಎಂದು ತಿಳಿಸಿದರು.

ಕಳೆದ ಹತ್ತು-ಹನ್ನೆರಡು ವರ್ಷಗಳ ಹಿಂದೆ ದೇಶದ ಆರ್ಥಿಕತೆ ಸುಮಾರು ಎರಡು ಟ್ರಿಲಿಯನ್ ಡಾಲರ್ ಮಟ್ಟದಲ್ಲಿತ್ತು. ಈಗ ಅದು ನಾಲ್ಕು ಟ್ರಿಲಿಯನ್ ಸನಿಹದಲ್ಲಿದ್ದು, 2027ರ ವೇಳೆಗೆ 5 ಟ್ರಿಲಿಯನ್ ತಲುಪಲಿದೆ. 2030ರ ವೇಳೆಗೆ 5 ಟ್ರಿಲಿಯನ್ ಮೀರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ ಈಗ ವಿಶ್ವಾಸ, ಭರವಸೆ ಮತ್ತು ಅವಕಾಶಗಳ ನಿರ್ಣಾಯಕ ಹಂತದಲ್ಲಿ ನಿಂತಿದೆ. ಆರ್ಥಿಕ ಸುಧಾರಣೆಗಳು, ದಕ್ಷ ಆಡಳಿತ ಮತ್ತು ವೇಗದ ಅಭಿವೃದ್ಧಿ ದೇಶವನ್ನು ಜಾಗತಿಕ ವೇದಿಕೆಯಲ್ಲಿ ಮುಂಚೂಣಿಗೆ ತರುತ್ತಿವೆ ಎಂದು ಹೇಳಿದರು.

ಕೇಂದ್ರ ಉಗ್ರಾಣ ನಿಗಮವು ಆರ್ಥಿಕ ಸಾಧನೆಯಲ್ಲಿ ದಾಖಲೆ ನಿರ್ಮಿಸಿದ್ದು, ಸರಕು ಸಂಗ್ರಹ ಮತ್ತು ಗೋದಾಮು ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದೆ. ವಹಿವಾಟು ಮತ್ತು ಲಾಭದಲ್ಲಿ ಹಿಂದಿನ ಮಾನದಂಡಗಳನ್ನು ಮೀರಿ ಮುನ್ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Union Minister Pralhad Joshi stated that India is on track to cross the 5 trillion dollar economy mark by 2030. Speaking at the 70th Foundation Day of the Central Warehousing Corporation in Delhi, he highlighted India’s rapid economic growth under Prime Minister Narendra Modi’s leadership and emphasized the corporation’s contribution to strengthening the logistics and storage sector.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

12 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

20 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

24 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago