Advertisement

ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ

Share

ಭಾರತದ ಕೃಷಿ ರಫ್ತು ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕಳೆದ ಒಂದು ದಶಕದಲ್ಲಿ ದೇಶದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ ಸುಮಾರು 280ರಿಂದ 500ಕ್ಕೆ  ಏರಿಕೆಯಾಗಿದೆ ಎಂದು ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (APEDA) ಅಧ್ಯಕ್ಷ ಅಭಿಷೇಕ್ ದೇವ್ ತಿಳಿಸಿದ್ದಾರೆ.

ಕಳೆದ ಹಣಕಾಸು ವರ್ಷದಲ್ಲಿ ಭಾರತದ ಕೃಷಿ ರಫ್ತು ಮೌಲ್ಯ ಸುಮಾರು 53 ಬಿಲಿಯನ್ ಡಾಲರ್ (ಸುಮಾರು ₹4.61 ಲಕ್ಷ ಕೋಟಿ) ತಲುಪಿದ್ದು, ವಿಶ್ವದ ಅಗ್ರ 10 ಕೃಷಿ ರಫ್ತು ರಾಷ್ಟ್ರಗಳಲ್ಲಿ ಭಾರತ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ. ಅಮೆರಿಕ, ಬ್ರೆಜಿಲ್, ಚೀನಾ ಹಾಗೂ ಯುರೋಪಿಯನ್ ಒಕ್ಕೂಟದಂತಹ ಬಲಿಷ್ಠ ಸ್ಪರ್ಧಿಗಳ ನಡುವೆಯೂ ಭಾರತ ಈ ಸಾಧನೆ ಮಾಡಿದೆ.

ಈ ಹಿಂದೆ ಅಕ್ಕಿ ಮತ್ತು ಮಸಾಲೆಗಳಿಗೆ ಸೀಮಿತವಾಗಿದ್ದ ಕೃಷಿ ರಫ್ತು ಈಗ ಬೇಳೆಕಾಳುಗಳು, ಕೋಕೋ ಉತ್ಪನ್ನಗಳು, ಅನಾನಸ್, ದ್ರಾಕ್ಷಿ, ದಾಳಿಂಬೆ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳತ್ತ ವಿಸ್ತರಿಸಿದೆ. ಭಾರತೀಯ ಕೃಷಿ ಉತ್ಪನ್ನಗಳು ಈಗ ಜಗತ್ತಿನ ಹಲವು ದೇಶಗಳ ಮಾರುಕಟ್ಟೆಗಳನ್ನು ತಲುಪುತ್ತಿವೆ.

ತಜ್ಞರ ಪ್ರಕಾರ, ಕೃಷಿ ರಫ್ತಿನ ವೈವಿಧ್ಯೀಕರಣವು ರೈತರ ಆದಾಯ ಹೆಚ್ಚಿಸಲು, ಕೆಲವೇ ಬೆಳೆಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಹಾಗೂ ಗ್ರಾಮೀಣ ಆರ್ಥಿಕತೆಗೆ ಬಲ ನೀಡಲು ಸಹಕಾರಿಯಾಗಲಿದೆ. ಗುಣಮಟ್ಟದ ಉತ್ಪಾದನೆ, ಸಂಸ್ಕರಣೆ, ಸಂಗ್ರಹಣೆ, ಲಾಜಿಸ್ಟಿಕ್ಸ್ ಮತ್ತು ಜಾಗತಿಕ ಮಾನದಂಡಗಳ ಅನುಸರಣೆ ಮುಂದಿನ ದಿನಗಳಲ್ಲಿ ಭಾರತೀಯ ರೈತರಿಗೆ ಇನ್ನಷ್ಟು ರಫ್ತು ಅವಕಾಶಗಳನ್ನು ಸೃಷ್ಟಿಸಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ವಿಶೇಷವಾಗಿ ಕರ್ನಾಟಕದ ಅಡಿಕೆ, ಕಾಫಿ, ಕಾಳುಮೆಣಸು, ಗೋಡಂಬಿ, ಹಲಸು, ದಾಳಿಂಬೆ, ಮಸಾಲೆ ಪದಾರ್ಥಗಳು ಹಾಗೂ ಮೌಲ್ಯವರ್ಧಿತ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತಿರುವುದು ರೈತರಿಗೆ ಆಶಾದಾಯಕ ಬೆಳವಣಿಗೆಯಾಗಿದೆ.

India’s agricultural export basket has expanded from around 280 products a decade ago to nearly 500 products today, according to APEDA Chairman Abhishek Dev. Agricultural exports touched nearly US$53 billion last year, with diversification beyond rice and spices into products such as pulses, cocoa products, pineapples, grapes and pomegranates, creating new opportunities for Indian farmers and agri-entrepreneurs.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

1 hour ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

2 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

4 hours ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

15 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

19 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

1 day ago