2030 ರ ವೇಳೆಗೆ ಭಾರತವು 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನೆಯ ಗುರಿ

August 21, 2025
6:40 AM

ಭಾರತವನ್ನು ಹಸಿರು ಜಲಜನಕ ರಫ್ತಿಗೆ ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಮತ್ತು ಅದರ ಜಾಗತಿಕ ಬೇಡಿಕೆಯ ಸುಮಾರು 10 ಪ್ರತಿಶತವನ್ನು ವಶಪಡಿಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್ ದೆಹಲಿಯಲ್ಲಿ ಹೇಳಿದ್ದಾರೆ.

ಹಸಿರು ಜಲಜನಕ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು,  ಭಾರತದಲ್ಲಿ ಹಸಿರು ಜಲಜನಕ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ.  ಕಳೆದ ಜೂನ್ ತಿಂಗಳ ಅವಧಿಯವರೆಗೆ, ಭಾರತದ ಸಂಚಿತ ಸ್ಥಾಪಿತ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಸುಮಾರು 237 ಗಿಗಾವ್ಯಾಟ್‌ಗಳನ್ನು ತಲುಪಿದೆ. 2030 ರ ವೇಳೆಗೆ ಭಾರತವು 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದಿಸುವ  ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು.  5 ರಾಜ್ಯಗಳು ಈಗಾಗಲೇ ತಮ್ಮ ಹಸಿರು ಜಲಜನಕ ನೀತಿಗಳನ್ನು ಪ್ರಕಟಿಸಿವೆ ಮತ್ತು ಇನ್ನೂ ಹಲವಾರು ಈ ದಿಕ್ಕಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಈ ರಾಜ್ಯಗಳು ಭೂ ಹಂಚಿಕೆಯನ್ನು ಸುಗಮಗೊಳಿಸುತ್ತಿವೆ, ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುತ್ತಿವೆ ಎಂದರು.  ನಾವು ಭಾರತವನ್ನು ಪ್ರಮುಖ ಉತ್ಪಾದಕರನ್ನಾಗಿ ಮಾತ್ರವಲ್ಲದೆ ಜಾಗತಿಕ ಹಸಿರು ಜಲಜನಕ ರಫ್ತಿನ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ,  ಇದರಿಂದಾಗಲೇ ಸರ್ಕಾರವು 2023 ರಲ್ಲಿ 19,744 ಕೋಟಿ ರೂಪಾಯಿ ವೆಚ್ಚದೊಂದಿಗೆ ರಾಷ್ಟ್ರೀಯ ಹಸಿರು ಜಲಜನಕ ಮಿಷನ್ ಅನ್ನು ಪ್ರಾರಂಭಿಸಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror