Advertisement
MIRROR FOCUS

2030 ರ ವೇಳೆಗೆ ಭಾರತವು 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನೆಯ ಗುರಿ

Share

ಭಾರತವನ್ನು ಹಸಿರು ಜಲಜನಕ ರಫ್ತಿಗೆ ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಮತ್ತು ಅದರ ಜಾಗತಿಕ ಬೇಡಿಕೆಯ ಸುಮಾರು 10 ಪ್ರತಿಶತವನ್ನು ವಶಪಡಿಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್ ದೆಹಲಿಯಲ್ಲಿ ಹೇಳಿದ್ದಾರೆ.

ಹಸಿರು ಜಲಜನಕ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು,  ಭಾರತದಲ್ಲಿ ಹಸಿರು ಜಲಜನಕ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ.  ಕಳೆದ ಜೂನ್ ತಿಂಗಳ ಅವಧಿಯವರೆಗೆ, ಭಾರತದ ಸಂಚಿತ ಸ್ಥಾಪಿತ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಸುಮಾರು 237 ಗಿಗಾವ್ಯಾಟ್‌ಗಳನ್ನು ತಲುಪಿದೆ. 2030 ರ ವೇಳೆಗೆ ಭಾರತವು 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದಿಸುವ  ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು.  5 ರಾಜ್ಯಗಳು ಈಗಾಗಲೇ ತಮ್ಮ ಹಸಿರು ಜಲಜನಕ ನೀತಿಗಳನ್ನು ಪ್ರಕಟಿಸಿವೆ ಮತ್ತು ಇನ್ನೂ ಹಲವಾರು ಈ ದಿಕ್ಕಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಈ ರಾಜ್ಯಗಳು ಭೂ ಹಂಚಿಕೆಯನ್ನು ಸುಗಮಗೊಳಿಸುತ್ತಿವೆ, ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುತ್ತಿವೆ ಎಂದರು.  ನಾವು ಭಾರತವನ್ನು ಪ್ರಮುಖ ಉತ್ಪಾದಕರನ್ನಾಗಿ ಮಾತ್ರವಲ್ಲದೆ ಜಾಗತಿಕ ಹಸಿರು ಜಲಜನಕ ರಫ್ತಿನ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ,  ಇದರಿಂದಾಗಲೇ ಸರ್ಕಾರವು 2023 ರಲ್ಲಿ 19,744 ಕೋಟಿ ರೂಪಾಯಿ ವೆಚ್ಚದೊಂದಿಗೆ ರಾಷ್ಟ್ರೀಯ ಹಸಿರು ಜಲಜನಕ ಮಿಷನ್ ಅನ್ನು ಪ್ರಾರಂಭಿಸಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

5 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

5 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

13 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

13 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

2 days ago