ಭಾರತವನ್ನು ಹಸಿರು ಜಲಜನಕ ರಫ್ತಿಗೆ ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಮತ್ತು ಅದರ ಜಾಗತಿಕ ಬೇಡಿಕೆಯ ಸುಮಾರು 10 ಪ್ರತಿಶತವನ್ನು ವಶಪಡಿಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್ ದೆಹಲಿಯಲ್ಲಿ ಹೇಳಿದ್ದಾರೆ.
ಹಸಿರು ಜಲಜನಕ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು, ಭಾರತದಲ್ಲಿ ಹಸಿರು ಜಲಜನಕ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಕಳೆದ ಜೂನ್ ತಿಂಗಳ ಅವಧಿಯವರೆಗೆ, ಭಾರತದ ಸಂಚಿತ ಸ್ಥಾಪಿತ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಸುಮಾರು 237 ಗಿಗಾವ್ಯಾಟ್ಗಳನ್ನು ತಲುಪಿದೆ. 2030 ರ ವೇಳೆಗೆ ಭಾರತವು 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದಿಸುವ ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು. 5 ರಾಜ್ಯಗಳು ಈಗಾಗಲೇ ತಮ್ಮ ಹಸಿರು ಜಲಜನಕ ನೀತಿಗಳನ್ನು ಪ್ರಕಟಿಸಿವೆ ಮತ್ತು ಇನ್ನೂ ಹಲವಾರು ಈ ದಿಕ್ಕಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಈ ರಾಜ್ಯಗಳು ಭೂ ಹಂಚಿಕೆಯನ್ನು ಸುಗಮಗೊಳಿಸುತ್ತಿವೆ, ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುತ್ತಿವೆ ಎಂದರು. ನಾವು ಭಾರತವನ್ನು ಪ್ರಮುಖ ಉತ್ಪಾದಕರನ್ನಾಗಿ ಮಾತ್ರವಲ್ಲದೆ ಜಾಗತಿಕ ಹಸಿರು ಜಲಜನಕ ರಫ್ತಿನ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ, ಇದರಿಂದಾಗಲೇ ಸರ್ಕಾರವು 2023 ರಲ್ಲಿ 19,744 ಕೋಟಿ ರೂಪಾಯಿ ವೆಚ್ಚದೊಂದಿಗೆ ರಾಷ್ಟ್ರೀಯ ಹಸಿರು ಜಲಜನಕ ಮಿಷನ್ ಅನ್ನು ಪ್ರಾರಂಭಿಸಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ” WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…