#I.N.D.I.A | ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಮೈತ್ರಿಕೂಟ “I.N.D.I.A” ಸಜ್ಜು | 26 ಭ್ರಷ್ಟರು ಒಂದೇ ಸೂರಿನಡಿ ಬಂದರು ಎಂದು ಟೀಕಿಸಿದ ಪ್ರಧಾನಿ |

July 18, 2023
7:22 PM
ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(I.N.D.I.A) ಎಂದು ನಾಮಕರಣ ಮಾಡಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(I.N.D.I.A) ಎಂದು ನಾಮಕರಣ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.

Advertisement
Advertisement

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು. 26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ ಎಂದರು. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಭ್ರಷ್ಟರ ಕೂಟ ಒಂದೇ ಸೂರಿನಡಿ - ಪ್ರಧಾನಿ ಮೋದಿ
ಇದೇ ವೇಳೆ ಪೋರ್ಟ್‌ಬ್ಲೇರ್‌ ವೀರ್‌ ಸಾವರ್ಕರ್‌ ವಿಮಾನ ನಿಲ್ದಾಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಭ್ರಷ್ಟರ ಕೂಟದ ಸಮ್ಮೇಳನ ನಡೆದಿದೆ. ಭ್ರಷ್ಟರೆಲ್ಲಾ ಒಂದೇ ಸೂರಿನಲ್ಲಿ ಸೇರಿದ್ದಾರೆ.ಕುಟುಂಬ ಹಿತವೇ ಅವರ ಉದ್ದೇಶ ಎಂದು ಹೇಳಿದ್ದಾರೆ.
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror