#I.N.D.I.A | ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಮೈತ್ರಿಕೂಟ “I.N.D.I.A” ಸಜ್ಜು | 26 ಭ್ರಷ್ಟರು ಒಂದೇ ಸೂರಿನಡಿ ಬಂದರು ಎಂದು ಟೀಕಿಸಿದ ಪ್ರಧಾನಿ |

July 18, 2023
7:22 PM
ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(I.N.D.I.A) ಎಂದು ನಾಮಕರಣ ಮಾಡಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(I.N.D.I.A) ಎಂದು ನಾಮಕರಣ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು. 26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ ಎಂದರು. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಭ್ರಷ್ಟರ ಕೂಟ ಒಂದೇ ಸೂರಿನಡಿ - ಪ್ರಧಾನಿ ಮೋದಿ
ಇದೇ ವೇಳೆ ಪೋರ್ಟ್‌ಬ್ಲೇರ್‌ ವೀರ್‌ ಸಾವರ್ಕರ್‌ ವಿಮಾನ ನಿಲ್ದಾಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಭ್ರಷ್ಟರ ಕೂಟದ ಸಮ್ಮೇಳನ ನಡೆದಿದೆ. ಭ್ರಷ್ಟರೆಲ್ಲಾ ಒಂದೇ ಸೂರಿನಲ್ಲಿ ಸೇರಿದ್ದಾರೆ.ಕುಟುಂಬ ಹಿತವೇ ಅವರ ಉದ್ದೇಶ ಎಂದು ಹೇಳಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror