Advertisement
MIRROR FOCUS

ಭೂತಾನ್‌ನಿಂದ ಮತ್ತೆ ಹಸಿ ಅಡಿಕೆ ಆಮದಿಗೆ ಅನುಮತಿ | ಈ ಬಾರಿ ಅಸ್ಸಾಂ ಮೂಲಕವೂ ಅವಕಾಶ…! | ಕಳ್ಳಸಾಗಾಣಿಕೆಗೆ ಪರೋಕ್ಷ ಬೆಂಬಲ..?

Share

ಭೂತಾನ್‌ನಿಂದ 17,000 ಟನ್‌ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022 ರ ನಿರ್ಧಾರದ ಪ್ರಕ್ರಿಯೆನ್ನು ಮತ್ತೆ ನವೀಕರಣ ಮಾಡಿದೆ. ಈ ಹಿಂದಿನ ದರವನ್ನೇ ನಿಗದಿ ಮಾಡಿದೆ. ಆದರೆ ಈ ಬಾರಿ ಒಡಿಸಾದ ಹತಿಸರ್  ಮತ್ತು ಅಸ್ಸಾಂನ ದರ್ರಂಗ ಕಸ್ಟಮ್ಸ್ ಸ್ಟೇಷನ್‌ಗಳ ಮೂಲಕವೂ ಸಹ ಹಸಿ ಅಡಿಕೆ ಆಮದಿಗೆ  ಅನುಮತಿ ನೀಡಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ ಅಧಿಸೂಚನೆಯಲ್ಲಿ ತಿಳಿಸಿದೆ. ಈಗಾಗಲೇ ಅಸ್ಸಾಂ ಮೂಲಕವೂ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವುದರಿಂದ ಪರೋಕ್ಷವಾಗಿ ಈ ಪ್ರಕ್ರಿಯೆಗೂ ಬೆಂಬಲ ನೀಡಿದಂತಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.…..ಮುಂದೆ ಓದಿ….

ಭೂತಾನ್‌ನಿಂದ ಕನಿಷ್ಠ ಆಮದು ದರವಿಲ್ಲದೆ ಹಸಿಅಡಿಕೆ ಆಮದು ಮಾಡಿಕೊಳ್ಳುವ ಪ್ರಕ್ರಿಯೆ 3 ವರ್ಷವಾಗಿದೆ. ಈ ಹಿಂದೆ ಭೂತಾನ್‌ ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಆರಂಭಿಕವಾಗಿ ಜೈಗಾಂವ್-ಫುಂಟ್‌ಶೋಲಿಂಗ್ ಮಾರ್ಗವಾಗಿ ಅನುಮತಿ ನೀಡಿತ್ತು. ಹೆಚ್ಚುವರಿ ಮಾರ್ಗವಾಗಿ ಚಾಮುರ್ಚಿ-ಸಂತ್ಸೆ ಮಾರ್ಗವೂ ಇರಿಸಿಕೊಳ್ಳಲಾಗಿತ್ತು. ಹೊಸ ಮಾರ್ಗವಾಗಿ ಹತಿಸರ್-ಗೆಲೆಫು ಮತ್ತು ದರಂಗ-ಸಂದ್ರೂಪ್ ಜೊಂಗ್‌ಖಾರ್, ಕುಲ್ಕುಲಿ-ಲಮೋಯಿಜಿಂಖಾ, ಕಮರ್ದ್ವೀಸಾ-ನಂಗ್ಲಾಮ್ ಮಾರ್ಗಗಳಿಗೆ ಬೇಡಿಕೆ ಇತ್ತು. ಆದರೆ ಅದಕ್ಕೆ 2 ವರ್ಷಗಳಿಂದ ಅನುಮತಿ ಇರಲಿಲ್ಲ. ಈ ಬಾರಿ  ಒಡಿಸಾದ ಹತಿಸರ್  ಮತ್ತು ಅಸ್ಸಾಂನ ದರ್ರಂಗ ಕಸ್ಟಮ್ಸ್ ಸ್ಟೇಷನ್‌ಗಳ ಮೂಲಕವೂ ಆಮದಿಗೆ ಅನುಮತಿ ನೀಡಲಾಗಿದೆ.

ಭೂತಾನ್‌ ಸರ್ಕಾರವು ಅಲ್ಲಿನ ಅಡಿಕೆ ಬೆಳೆಗಾರರು ಸಮಸ್ಯೆ ಎದುರಿಸುತ್ತಿರುವ ನಿಟ್ಟಿನಲ್ಲಿ ಭಾರತಕ್ಕೆ ಅಡಿಕೆ ರವಾನೆ ಮಾಡಲು ಇನ್ನೂ ಎರಡು ಮಾರ್ಗಗಳಿಗೆ ಬೇಡಿಕೆ ಸಲ್ಲಿಸಿತ್ತು.

ಈಗಾಗಲೇ ಭಾರತಕ್ಕೆ ಕಳ್ಳದಾರಿಯ ಮೂಲಕ ಬರ್ಮಾ ಅಡಿಕೆ ಆಮದಾಗುತ್ತಿದೆ. ಇದು  ಹಲವು ಕಡೆ ಪತ್ತೆಯಾಗಿದೆ, ಇಲ್ಲಿನ ಅಡಿಕೆ ಜೊತೆ ಸೇರಿಸಿ ಅಡಿಕೆ ಮಾರಾಟ ಪ್ರಕ್ರಿಯೆಯೂ ಬೆಳಕಿಗೆ ಬಂದಿದೆ. ಈ ನಡುವೆ ತೆರಿಗೆ ತಪ್ಪಿಸಲು ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ಪ್ರಕ್ರಿಯೆ ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಅಸ್ಸಾಂ ಸಹಿತ ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವ ವೇಳೆ ಭೂತಾನ್‌ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುವ ಸಾಧ್ಯತೆ ಇರುವ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಈಗಾಗಲೇ ಕೆಲವು ಕಡೆ ಕೆಲವೊಂದು  ಅಧಿಕಾರಿಗಳು ಹಣ ಪಡೆದು ಬರ್ಮಾ ಅಡಿಕೆಯನ್ನು ಸಾಗಿಸಲು ಅನುಮತಿ ನೀಡುತ್ತಾರೆ ಎನ್ನುವ ಆರೋಪವೂ ಇದೆ. ಹೀಗಾಗಿ ಸರ್ಕಾರ ಗಂಭೀರವಾಗಿ ಈ ಬಗ್ಗೆ ಗಮನಹರಿಸದೇ ಇದ್ದರೆ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ.

India has permitted import of fresh (green) areca nut without minimum import price condition from Bhutan through land customs stations (LCS) of Hatisar (Odisha) and Darranga (Assam) also, the directorate general of foreign trade (DGFT) said in a notification. ( Source – PTI)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

3 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago