ಭೂತಾನ್ನಿಂದ 17,000 ಟನ್ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022 ರ ನಿರ್ಧಾರದ ಪ್ರಕ್ರಿಯೆನ್ನು ಮತ್ತೆ ನವೀಕರಣ ಮಾಡಿದೆ. ಈ ಹಿಂದಿನ ದರವನ್ನೇ ನಿಗದಿ ಮಾಡಿದೆ. ಆದರೆ ಈ ಬಾರಿ ಒಡಿಸಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗ ಕಸ್ಟಮ್ಸ್ ಸ್ಟೇಷನ್ಗಳ ಮೂಲಕವೂ ಸಹ ಹಸಿ ಅಡಿಕೆ ಆಮದಿಗೆ ಅನುಮತಿ ನೀಡಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ ಅಧಿಸೂಚನೆಯಲ್ಲಿ ತಿಳಿಸಿದೆ. ಈಗಾಗಲೇ ಅಸ್ಸಾಂ ಮೂಲಕವೂ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವುದರಿಂದ ಪರೋಕ್ಷವಾಗಿ ಈ ಪ್ರಕ್ರಿಯೆಗೂ ಬೆಂಬಲ ನೀಡಿದಂತಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.…..ಮುಂದೆ ಓದಿ….
ಭೂತಾನ್ನಿಂದ ಕನಿಷ್ಠ ಆಮದು ದರವಿಲ್ಲದೆ ಹಸಿಅಡಿಕೆ ಆಮದು ಮಾಡಿಕೊಳ್ಳುವ ಪ್ರಕ್ರಿಯೆ 3 ವರ್ಷವಾಗಿದೆ. ಈ ಹಿಂದೆ ಭೂತಾನ್ ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಆರಂಭಿಕವಾಗಿ ಜೈಗಾಂವ್-ಫುಂಟ್ಶೋಲಿಂಗ್ ಮಾರ್ಗವಾಗಿ ಅನುಮತಿ ನೀಡಿತ್ತು. ಹೆಚ್ಚುವರಿ ಮಾರ್ಗವಾಗಿ ಚಾಮುರ್ಚಿ-ಸಂತ್ಸೆ ಮಾರ್ಗವೂ ಇರಿಸಿಕೊಳ್ಳಲಾಗಿತ್ತು. ಹೊಸ ಮಾರ್ಗವಾಗಿ ಹತಿಸರ್-ಗೆಲೆಫು ಮತ್ತು ದರಂಗ-ಸಂದ್ರೂಪ್ ಜೊಂಗ್ಖಾರ್, ಕುಲ್ಕುಲಿ-ಲಮೋಯಿಜಿಂಖಾ, ಕಮರ್ದ್ವೀಸಾ-ನಂಗ್ಲಾಮ್ ಮಾರ್ಗಗಳಿಗೆ ಬೇಡಿಕೆ ಇತ್ತು. ಆದರೆ ಅದಕ್ಕೆ 2 ವರ್ಷಗಳಿಂದ ಅನುಮತಿ ಇರಲಿಲ್ಲ. ಈ ಬಾರಿ ಒಡಿಸಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗ ಕಸ್ಟಮ್ಸ್ ಸ್ಟೇಷನ್ಗಳ ಮೂಲಕವೂ ಆಮದಿಗೆ ಅನುಮತಿ ನೀಡಲಾಗಿದೆ.
ಭೂತಾನ್ ಸರ್ಕಾರವು ಅಲ್ಲಿನ ಅಡಿಕೆ ಬೆಳೆಗಾರರು ಸಮಸ್ಯೆ ಎದುರಿಸುತ್ತಿರುವ ನಿಟ್ಟಿನಲ್ಲಿ ಭಾರತಕ್ಕೆ ಅಡಿಕೆ ರವಾನೆ ಮಾಡಲು ಇನ್ನೂ ಎರಡು ಮಾರ್ಗಗಳಿಗೆ ಬೇಡಿಕೆ ಸಲ್ಲಿಸಿತ್ತು.
ಈಗಾಗಲೇ ಭಾರತಕ್ಕೆ ಕಳ್ಳದಾರಿಯ ಮೂಲಕ ಬರ್ಮಾ ಅಡಿಕೆ ಆಮದಾಗುತ್ತಿದೆ. ಇದು ಹಲವು ಕಡೆ ಪತ್ತೆಯಾಗಿದೆ, ಇಲ್ಲಿನ ಅಡಿಕೆ ಜೊತೆ ಸೇರಿಸಿ ಅಡಿಕೆ ಮಾರಾಟ ಪ್ರಕ್ರಿಯೆಯೂ ಬೆಳಕಿಗೆ ಬಂದಿದೆ. ಈ ನಡುವೆ ತೆರಿಗೆ ತಪ್ಪಿಸಲು ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ಪ್ರಕ್ರಿಯೆ ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಅಸ್ಸಾಂ ಸಹಿತ ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವ ವೇಳೆ ಭೂತಾನ್ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುವ ಸಾಧ್ಯತೆ ಇರುವ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಈಗಾಗಲೇ ಕೆಲವು ಕಡೆ ಕೆಲವೊಂದು ಅಧಿಕಾರಿಗಳು ಹಣ ಪಡೆದು ಬರ್ಮಾ ಅಡಿಕೆಯನ್ನು ಸಾಗಿಸಲು ಅನುಮತಿ ನೀಡುತ್ತಾರೆ ಎನ್ನುವ ಆರೋಪವೂ ಇದೆ. ಹೀಗಾಗಿ ಸರ್ಕಾರ ಗಂಭೀರವಾಗಿ ಈ ಬಗ್ಗೆ ಗಮನಹರಿಸದೇ ಇದ್ದರೆ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ.
India has permitted import of fresh (green) areca nut without minimum import price condition from Bhutan through land customs stations (LCS) of Hatisar (Odisha) and Darranga (Assam) also, the directorate general of foreign trade (DGFT) said in a notification. ( Source – PTI)
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…