Advertisement
MIRROR FOCUS

ಭೂತಾನ್‌ನಿಂದ ಮತ್ತೆ ಹಸಿ ಅಡಿಕೆ ಆಮದಿಗೆ ಅನುಮತಿ | ಈ ಬಾರಿ ಅಸ್ಸಾಂ ಮೂಲಕವೂ ಅವಕಾಶ…! | ಕಳ್ಳಸಾಗಾಣಿಕೆಗೆ ಪರೋಕ್ಷ ಬೆಂಬಲ..?

Share

ಭೂತಾನ್‌ನಿಂದ 17,000 ಟನ್‌ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022 ರ ನಿರ್ಧಾರದ ಪ್ರಕ್ರಿಯೆನ್ನು ಮತ್ತೆ ನವೀಕರಣ ಮಾಡಿದೆ. ಈ ಹಿಂದಿನ ದರವನ್ನೇ ನಿಗದಿ ಮಾಡಿದೆ. ಆದರೆ ಈ ಬಾರಿ ಒಡಿಸಾದ ಹತಿಸರ್  ಮತ್ತು ಅಸ್ಸಾಂನ ದರ್ರಂಗ ಕಸ್ಟಮ್ಸ್ ಸ್ಟೇಷನ್‌ಗಳ ಮೂಲಕವೂ ಸಹ ಹಸಿ ಅಡಿಕೆ ಆಮದಿಗೆ  ಅನುಮತಿ ನೀಡಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ ಅಧಿಸೂಚನೆಯಲ್ಲಿ ತಿಳಿಸಿದೆ. ಈಗಾಗಲೇ ಅಸ್ಸಾಂ ಮೂಲಕವೂ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವುದರಿಂದ ಪರೋಕ್ಷವಾಗಿ ಈ ಪ್ರಕ್ರಿಯೆಗೂ ಬೆಂಬಲ ನೀಡಿದಂತಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.…..ಮುಂದೆ ಓದಿ….

ಭೂತಾನ್‌ನಿಂದ ಕನಿಷ್ಠ ಆಮದು ದರವಿಲ್ಲದೆ ಹಸಿಅಡಿಕೆ ಆಮದು ಮಾಡಿಕೊಳ್ಳುವ ಪ್ರಕ್ರಿಯೆ 3 ವರ್ಷವಾಗಿದೆ. ಈ ಹಿಂದೆ ಭೂತಾನ್‌ ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಆರಂಭಿಕವಾಗಿ ಜೈಗಾಂವ್-ಫುಂಟ್‌ಶೋಲಿಂಗ್ ಮಾರ್ಗವಾಗಿ ಅನುಮತಿ ನೀಡಿತ್ತು. ಹೆಚ್ಚುವರಿ ಮಾರ್ಗವಾಗಿ ಚಾಮುರ್ಚಿ-ಸಂತ್ಸೆ ಮಾರ್ಗವೂ ಇರಿಸಿಕೊಳ್ಳಲಾಗಿತ್ತು. ಹೊಸ ಮಾರ್ಗವಾಗಿ ಹತಿಸರ್-ಗೆಲೆಫು ಮತ್ತು ದರಂಗ-ಸಂದ್ರೂಪ್ ಜೊಂಗ್‌ಖಾರ್, ಕುಲ್ಕುಲಿ-ಲಮೋಯಿಜಿಂಖಾ, ಕಮರ್ದ್ವೀಸಾ-ನಂಗ್ಲಾಮ್ ಮಾರ್ಗಗಳಿಗೆ ಬೇಡಿಕೆ ಇತ್ತು. ಆದರೆ ಅದಕ್ಕೆ 2 ವರ್ಷಗಳಿಂದ ಅನುಮತಿ ಇರಲಿಲ್ಲ. ಈ ಬಾರಿ  ಒಡಿಸಾದ ಹತಿಸರ್  ಮತ್ತು ಅಸ್ಸಾಂನ ದರ್ರಂಗ ಕಸ್ಟಮ್ಸ್ ಸ್ಟೇಷನ್‌ಗಳ ಮೂಲಕವೂ ಆಮದಿಗೆ ಅನುಮತಿ ನೀಡಲಾಗಿದೆ.

ಭೂತಾನ್‌ ಸರ್ಕಾರವು ಅಲ್ಲಿನ ಅಡಿಕೆ ಬೆಳೆಗಾರರು ಸಮಸ್ಯೆ ಎದುರಿಸುತ್ತಿರುವ ನಿಟ್ಟಿನಲ್ಲಿ ಭಾರತಕ್ಕೆ ಅಡಿಕೆ ರವಾನೆ ಮಾಡಲು ಇನ್ನೂ ಎರಡು ಮಾರ್ಗಗಳಿಗೆ ಬೇಡಿಕೆ ಸಲ್ಲಿಸಿತ್ತು.

ಈಗಾಗಲೇ ಭಾರತಕ್ಕೆ ಕಳ್ಳದಾರಿಯ ಮೂಲಕ ಬರ್ಮಾ ಅಡಿಕೆ ಆಮದಾಗುತ್ತಿದೆ. ಇದು  ಹಲವು ಕಡೆ ಪತ್ತೆಯಾಗಿದೆ, ಇಲ್ಲಿನ ಅಡಿಕೆ ಜೊತೆ ಸೇರಿಸಿ ಅಡಿಕೆ ಮಾರಾಟ ಪ್ರಕ್ರಿಯೆಯೂ ಬೆಳಕಿಗೆ ಬಂದಿದೆ. ಈ ನಡುವೆ ತೆರಿಗೆ ತಪ್ಪಿಸಲು ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ಪ್ರಕ್ರಿಯೆ ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಅಸ್ಸಾಂ ಸಹಿತ ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವ ವೇಳೆ ಭೂತಾನ್‌ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುವ ಸಾಧ್ಯತೆ ಇರುವ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಈಗಾಗಲೇ ಕೆಲವು ಕಡೆ ಕೆಲವೊಂದು  ಅಧಿಕಾರಿಗಳು ಹಣ ಪಡೆದು ಬರ್ಮಾ ಅಡಿಕೆಯನ್ನು ಸಾಗಿಸಲು ಅನುಮತಿ ನೀಡುತ್ತಾರೆ ಎನ್ನುವ ಆರೋಪವೂ ಇದೆ. ಹೀಗಾಗಿ ಸರ್ಕಾರ ಗಂಭೀರವಾಗಿ ಈ ಬಗ್ಗೆ ಗಮನಹರಿಸದೇ ಇದ್ದರೆ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ.

India has permitted import of fresh (green) areca nut without minimum import price condition from Bhutan through land customs stations (LCS) of Hatisar (Odisha) and Darranga (Assam) also, the directorate general of foreign trade (DGFT) said in a notification. ( Source – PTI)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

9 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

9 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

9 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

14 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago