Advertisement
MIRROR FOCUS

ಗಣಿಗಾರಿಕೆ ಭಾರತಕ್ಕೆ ಲಾಭವೇ ಜಾಸ್ತಿ

Share

ಭಾರತ ದೇಶವು ಹೇರಳ ಸಂಪತ್ತುಗಳ ದೇಶ. ಈ ಹಿಂದೆ ಅನೇಕ ರಾಜಗಳು ದಂಡೆತ್ತಿ ಬಂದದ್ದೂ ಅದೇ ಕಾರಣದಿಂದ. ಇದೀಗ ಭಾರತವು ತನ್ನ ನೆಲದಲ್ಲೇ ಲಭ್ಯ ಇರುವ ಹೇರಳ ಖನಿಜ ಸಂಪನ್ಮೂಲವನ್ನು ಉಪಯೋಗಿಸಿಕೊಂಡರೆ ಭಾರತ ಸಾಕಷ್ಟು ಹಣ ಉಳಿಸಲು ಸಾಧ್ಯ ಎಂದು ಸೆಂಟರ್ ಫಾರ್ ಸೋಷಿಯಲ್ ಅಂಡ್ ಎಕನಾಮಿಕ್ ಪ್ರೋಗ್ರೆಸ್ (ಸಿಎಸ್​​ಇಪಿ) ವರದಿಯಲ್ಲಿ ಹೇಳಲಾಗಿದೆ.

Advertisement
Advertisement

ದೇಶದಲ್ಲಿ ಇಲ್ಲಿಯವರೆಗೆ ಶೇ.30ರಷ್ಟು ಮಾತ್ರ ಖನಿಜ ಸಂಪನ್ಮೂಲಗಳನ್ನು ಪತ್ತೆ ಹಚ್ಚಲಾಗಿದೆ. ಇತರ ದೇಶಗಳಿಗೆ ಹೋಲಿಸಿದರೆ ಭಾರತವು ಹೆಚ್ಚಿನ ಗಣಿಗಾರಿಕೆ ನಡೆಸಿಲ್ಲ. ತನ್ನ ನೆಲದಲ್ಲೇ ಲಭ್ಯ ವಿರುವ ಹೇರಳ ಖನಿಜ ಸಂಪನ್ಮೂಲವನ್ನು ಉಪಯೋಗಿಸಿಕೊಂಡರೆ ಭಾರತ ಸಾಕಷ್ಟು ಹಣ ಉಳಿಸಲು ಸಾಧ್ಯ ಎಂದು ವರದಿ ತಿಳಿಸಿದೆ. ಖನಿಜ ಸಂಪನ್ಮೂಲಗಳನ್ನು ಹೆಚ್ಚುವರಿ ಮೈನಿಂಗ್ ಮೂಲಕ ಪಡೆದರೆ ಪ್ರತಿ ವರ್ಷ 100 ಬಿಲಿಯನ್ ಡಾಲರ್ ಅಂದರೆ 9 ಲಕ್ಷ ಕೋಟಿ ರೂ ಆಮದು ವೆಚ್ಚವನ್ನು ತಪ್ಪಿಸಬಹುದು ಎಂದು ಹೇಳಿದೆ.

ಆದರೆ, ಸಾಕಷ್ಟು ವೆಚ್ಚ ಮಾಡಿ ಸಂಪನ್ಮೂಲವನ್ನು ಪತ್ತೆ ಮಾಡಿದರೂ, ಆ ನಿಕ್ಷೇಪಗಳ ಮೇಲೆ ಕಂಪನಿಗೆ ಹಕ್ಕು ಇರುವುದಿಲ್ಲ. ಸರ್ಕಾರವು ಹರಾಜುಗಳ ಮೂಲಕ ಮೈನಿಂಗ್ ಲೀಸ್​ಗಳನ್ನು ಹಂಚಿಕೆ ಮಾಡುತ್ತದೆ. ಇದರಿಂದಾಗಿ, ಸಂಪನ್ಮೂಲ ಅನ್ವೇಷಣೆಗೆ ಕಂಪನಿಗಳು ಹಿಂದೇಟು ಹಾಕುತ್ತವೆ ಎಂಬುದನ್ನು ಈ ವರದಿ ಹೇಳಿದೆ.

ಭಾರತಕ್ಕೆ ಸಾಕಷ್ಟು ಖನಿಜ ಮತ್ತು ಲೋಹಗಳ ಅವಶ್ಯಕತೆ ಇದೆ. 2022ರಲ್ಲಿ ಭಾರತವು ಈ ಖನಿಜ ಮತ್ತು ಲೋಹಗಳನ್ನು 157 ಬಿಲಿಯನ್ ಡಾಲರ್ ಮೌಲ್ಯದಷ್ಟು ಆಮದು ಮಾಡಿಕೊಂಡಿತ್ತು. ಆ ವರ್ಷ ಭಾರತದ ಒಟ್ಟು ಆಮದಿನಲ್ಲಿ ಇವುಗಳ ಪಾಲು ಶೇ. 20ಕ್ಕಿಂತಲೂ ಹೆಚ್ಚಿತ್ತು. ಅದರಲ್ಲೂ ಕ್ರಿಟಿಕಲ್ ಮಿನರಲ್ ಎನ್ನಲಾದ ಕಾಪರ್, ನಿಕಲ್, ಲಿಥಿಯಂ, ಕೊಬಾಲ್ಟ್ ಅನ್ನು ಭಾರತ ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

13 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

13 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

13 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

14 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

14 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

14 hours ago