Advertisement
MIRROR FOCUS

ಗಣಿಗಾರಿಕೆ ಭಾರತಕ್ಕೆ ಲಾಭವೇ ಜಾಸ್ತಿ

Share

ಭಾರತ ದೇಶವು ಹೇರಳ ಸಂಪತ್ತುಗಳ ದೇಶ. ಈ ಹಿಂದೆ ಅನೇಕ ರಾಜಗಳು ದಂಡೆತ್ತಿ ಬಂದದ್ದೂ ಅದೇ ಕಾರಣದಿಂದ. ಇದೀಗ ಭಾರತವು ತನ್ನ ನೆಲದಲ್ಲೇ ಲಭ್ಯ ಇರುವ ಹೇರಳ ಖನಿಜ ಸಂಪನ್ಮೂಲವನ್ನು ಉಪಯೋಗಿಸಿಕೊಂಡರೆ ಭಾರತ ಸಾಕಷ್ಟು ಹಣ ಉಳಿಸಲು ಸಾಧ್ಯ ಎಂದು ಸೆಂಟರ್ ಫಾರ್ ಸೋಷಿಯಲ್ ಅಂಡ್ ಎಕನಾಮಿಕ್ ಪ್ರೋಗ್ರೆಸ್ (ಸಿಎಸ್​​ಇಪಿ) ವರದಿಯಲ್ಲಿ ಹೇಳಲಾಗಿದೆ.

ದೇಶದಲ್ಲಿ ಇಲ್ಲಿಯವರೆಗೆ ಶೇ.30ರಷ್ಟು ಮಾತ್ರ ಖನಿಜ ಸಂಪನ್ಮೂಲಗಳನ್ನು ಪತ್ತೆ ಹಚ್ಚಲಾಗಿದೆ. ಇತರ ದೇಶಗಳಿಗೆ ಹೋಲಿಸಿದರೆ ಭಾರತವು ಹೆಚ್ಚಿನ ಗಣಿಗಾರಿಕೆ ನಡೆಸಿಲ್ಲ. ತನ್ನ ನೆಲದಲ್ಲೇ ಲಭ್ಯ ವಿರುವ ಹೇರಳ ಖನಿಜ ಸಂಪನ್ಮೂಲವನ್ನು ಉಪಯೋಗಿಸಿಕೊಂಡರೆ ಭಾರತ ಸಾಕಷ್ಟು ಹಣ ಉಳಿಸಲು ಸಾಧ್ಯ ಎಂದು ವರದಿ ತಿಳಿಸಿದೆ. ಖನಿಜ ಸಂಪನ್ಮೂಲಗಳನ್ನು ಹೆಚ್ಚುವರಿ ಮೈನಿಂಗ್ ಮೂಲಕ ಪಡೆದರೆ ಪ್ರತಿ ವರ್ಷ 100 ಬಿಲಿಯನ್ ಡಾಲರ್ ಅಂದರೆ 9 ಲಕ್ಷ ಕೋಟಿ ರೂ ಆಮದು ವೆಚ್ಚವನ್ನು ತಪ್ಪಿಸಬಹುದು ಎಂದು ಹೇಳಿದೆ.

ಆದರೆ, ಸಾಕಷ್ಟು ವೆಚ್ಚ ಮಾಡಿ ಸಂಪನ್ಮೂಲವನ್ನು ಪತ್ತೆ ಮಾಡಿದರೂ, ಆ ನಿಕ್ಷೇಪಗಳ ಮೇಲೆ ಕಂಪನಿಗೆ ಹಕ್ಕು ಇರುವುದಿಲ್ಲ. ಸರ್ಕಾರವು ಹರಾಜುಗಳ ಮೂಲಕ ಮೈನಿಂಗ್ ಲೀಸ್​ಗಳನ್ನು ಹಂಚಿಕೆ ಮಾಡುತ್ತದೆ. ಇದರಿಂದಾಗಿ, ಸಂಪನ್ಮೂಲ ಅನ್ವೇಷಣೆಗೆ ಕಂಪನಿಗಳು ಹಿಂದೇಟು ಹಾಕುತ್ತವೆ ಎಂಬುದನ್ನು ಈ ವರದಿ ಹೇಳಿದೆ.

ಭಾರತಕ್ಕೆ ಸಾಕಷ್ಟು ಖನಿಜ ಮತ್ತು ಲೋಹಗಳ ಅವಶ್ಯಕತೆ ಇದೆ. 2022ರಲ್ಲಿ ಭಾರತವು ಈ ಖನಿಜ ಮತ್ತು ಲೋಹಗಳನ್ನು 157 ಬಿಲಿಯನ್ ಡಾಲರ್ ಮೌಲ್ಯದಷ್ಟು ಆಮದು ಮಾಡಿಕೊಂಡಿತ್ತು. ಆ ವರ್ಷ ಭಾರತದ ಒಟ್ಟು ಆಮದಿನಲ್ಲಿ ಇವುಗಳ ಪಾಲು ಶೇ. 20ಕ್ಕಿಂತಲೂ ಹೆಚ್ಚಿತ್ತು. ಅದರಲ್ಲೂ ಕ್ರಿಟಿಕಲ್ ಮಿನರಲ್ ಎನ್ನಲಾದ ಕಾಪರ್, ನಿಕಲ್, ಲಿಥಿಯಂ, ಕೊಬಾಲ್ಟ್ ಅನ್ನು ಭಾರತ ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

6 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

8 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

15 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

21 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago