Advertisement
MIRROR FOCUS

ಗಣಿಗಾರಿಕೆ ಭಾರತಕ್ಕೆ ಲಾಭವೇ ಜಾಸ್ತಿ

Share

ಭಾರತ ದೇಶವು ಹೇರಳ ಸಂಪತ್ತುಗಳ ದೇಶ. ಈ ಹಿಂದೆ ಅನೇಕ ರಾಜಗಳು ದಂಡೆತ್ತಿ ಬಂದದ್ದೂ ಅದೇ ಕಾರಣದಿಂದ. ಇದೀಗ ಭಾರತವು ತನ್ನ ನೆಲದಲ್ಲೇ ಲಭ್ಯ ಇರುವ ಹೇರಳ ಖನಿಜ ಸಂಪನ್ಮೂಲವನ್ನು ಉಪಯೋಗಿಸಿಕೊಂಡರೆ ಭಾರತ ಸಾಕಷ್ಟು ಹಣ ಉಳಿಸಲು ಸಾಧ್ಯ ಎಂದು ಸೆಂಟರ್ ಫಾರ್ ಸೋಷಿಯಲ್ ಅಂಡ್ ಎಕನಾಮಿಕ್ ಪ್ರೋಗ್ರೆಸ್ (ಸಿಎಸ್​​ಇಪಿ) ವರದಿಯಲ್ಲಿ ಹೇಳಲಾಗಿದೆ.

ದೇಶದಲ್ಲಿ ಇಲ್ಲಿಯವರೆಗೆ ಶೇ.30ರಷ್ಟು ಮಾತ್ರ ಖನಿಜ ಸಂಪನ್ಮೂಲಗಳನ್ನು ಪತ್ತೆ ಹಚ್ಚಲಾಗಿದೆ. ಇತರ ದೇಶಗಳಿಗೆ ಹೋಲಿಸಿದರೆ ಭಾರತವು ಹೆಚ್ಚಿನ ಗಣಿಗಾರಿಕೆ ನಡೆಸಿಲ್ಲ. ತನ್ನ ನೆಲದಲ್ಲೇ ಲಭ್ಯ ವಿರುವ ಹೇರಳ ಖನಿಜ ಸಂಪನ್ಮೂಲವನ್ನು ಉಪಯೋಗಿಸಿಕೊಂಡರೆ ಭಾರತ ಸಾಕಷ್ಟು ಹಣ ಉಳಿಸಲು ಸಾಧ್ಯ ಎಂದು ವರದಿ ತಿಳಿಸಿದೆ. ಖನಿಜ ಸಂಪನ್ಮೂಲಗಳನ್ನು ಹೆಚ್ಚುವರಿ ಮೈನಿಂಗ್ ಮೂಲಕ ಪಡೆದರೆ ಪ್ರತಿ ವರ್ಷ 100 ಬಿಲಿಯನ್ ಡಾಲರ್ ಅಂದರೆ 9 ಲಕ್ಷ ಕೋಟಿ ರೂ ಆಮದು ವೆಚ್ಚವನ್ನು ತಪ್ಪಿಸಬಹುದು ಎಂದು ಹೇಳಿದೆ.

ಆದರೆ, ಸಾಕಷ್ಟು ವೆಚ್ಚ ಮಾಡಿ ಸಂಪನ್ಮೂಲವನ್ನು ಪತ್ತೆ ಮಾಡಿದರೂ, ಆ ನಿಕ್ಷೇಪಗಳ ಮೇಲೆ ಕಂಪನಿಗೆ ಹಕ್ಕು ಇರುವುದಿಲ್ಲ. ಸರ್ಕಾರವು ಹರಾಜುಗಳ ಮೂಲಕ ಮೈನಿಂಗ್ ಲೀಸ್​ಗಳನ್ನು ಹಂಚಿಕೆ ಮಾಡುತ್ತದೆ. ಇದರಿಂದಾಗಿ, ಸಂಪನ್ಮೂಲ ಅನ್ವೇಷಣೆಗೆ ಕಂಪನಿಗಳು ಹಿಂದೇಟು ಹಾಕುತ್ತವೆ ಎಂಬುದನ್ನು ಈ ವರದಿ ಹೇಳಿದೆ.

ಭಾರತಕ್ಕೆ ಸಾಕಷ್ಟು ಖನಿಜ ಮತ್ತು ಲೋಹಗಳ ಅವಶ್ಯಕತೆ ಇದೆ. 2022ರಲ್ಲಿ ಭಾರತವು ಈ ಖನಿಜ ಮತ್ತು ಲೋಹಗಳನ್ನು 157 ಬಿಲಿಯನ್ ಡಾಲರ್ ಮೌಲ್ಯದಷ್ಟು ಆಮದು ಮಾಡಿಕೊಂಡಿತ್ತು. ಆ ವರ್ಷ ಭಾರತದ ಒಟ್ಟು ಆಮದಿನಲ್ಲಿ ಇವುಗಳ ಪಾಲು ಶೇ. 20ಕ್ಕಿಂತಲೂ ಹೆಚ್ಚಿತ್ತು. ಅದರಲ್ಲೂ ಕ್ರಿಟಿಕಲ್ ಮಿನರಲ್ ಎನ್ನಲಾದ ಕಾಪರ್, ನಿಕಲ್, ಲಿಥಿಯಂ, ಕೊಬಾಲ್ಟ್ ಅನ್ನು ಭಾರತ ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

11 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

21 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago