Advertisement
ಸುದ್ದಿಗಳು

#riceshortage | ಅಮೆರಿಕದಲ್ಲಿ ಅಕ್ಕಿಗೆ ಅಭಾವ | ಅಂಗಡಿಯ ಮುಂದೆ ಅಕ್ಕಿ ಖರೀದಿಸಲು ಕ್ಯೂನಿಂತ ಭಾರತೀಯರು |

Share

ಭಾರತ ಸರ್ಕಾರವು ಅಕ್ಕಿ ರಫ್ತಿನ ಮೇಲೆ ನಿಷೇಧ ಹೇರಿದ ಹಿನ್ನಲೆ ಅಮೆರಿಕದಲ್ಲಿ ಅಕ್ಕಿ ಅಭಾವ ಉಂಟಾಗಿದೆ. ಹೀಗಾಗಿ ಅಂಗಡಿಗಳ ಮುಂದೆ ಭಾರತೀಯರು  ಕ್ಯೂ ನಿಂತು ಅಕ್ಕಿ ಖರೀದಿಸುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅಕ್ಕಿಯ ಕೊರತೆ ಉಂಟಾಗಬಹುದು ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಅಮೇರಿಕಾದಲ್ಲಿರುವ ಭಾರತೀಯರು ಅಕ್ಕಿಗಾಗಿ ಮುಗಿಬಿದ್ದರು.

ಕೇಂದ್ರ ಸರ್ಕಾರ ಗುರುವಾರ ಬಾಸ್ಮತಿ ಅಕ್ಕಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ಅಕ್ಕಿಯ ರಫ್ತು ಮೇಲೆ ನಿಷೇಧ ಹೇರಿದ ಹಿನ್ನೆಲೆಯಲ್ಲಿ ಅಮೇರಿಕಾದಲ್ಲಿ ಅಕ್ಕಿಯ ಕೊರತೆ ಉಂಟಾಗಿದೆ.ಹೀಗಾಗಿ  ಅಮೆರಿಕದಲ್ಲಿರುವ ಅನಿವಾಸಿ ಭಾರತೀಯರಿಗೆ ಊಟಕ್ಕೆ ಅಕ್ಕಿಗಾಗಿ ಅಂಗಡಿ ಮುಂದೆ  ಸರತಿ ಸಾಲಿನಲ್ಲಿ ನಿಂತು ಅಕ್ಕಿ ಗೋಣಿ ಖರೀದಿ ಮಾಡುತ್ತಿದ್ದಾರೆ. ಅಮೆರಿಕದಲ್ಲಿ ಸುಮಾರು 50 ಲಕ್ಷ ಭಾರತೀಯರಿದ್ದು, ಅವರಲ್ಲಿ ಹೆಚ್ಚಿನ ಜನರು ಅಕ್ಕಿಯನ್ನೇ ಆಹಾರವಾಗಿ ಬಳಸುತ್ತಾರೆ.

ಈಗ ಭಾರತೀಯರು ಅಕ್ಕಿಯನ್ನು ತರಲು ಭಾರತೀಯ ಮಳಿಗೆಗಳು ಹಾಗೂ ಕಾಸ್ಟ್ಕೋ ಮಳಿಗೆಗಳಿಗೆಗೆ ಹೆಚ್ಚಿನ ಪ್ರಮಾಣದಲ್ಲಿ ಧಾವಿಸುತ್ತಿದ್ದಾರೆ. ಆದರೆ, ಬಹಳಷ್ಟು ಸ್ಟೋರ್‌ಗಳು ಒಬ್ಬರಿಗೆ ಒಂದೇ ಚೀಲ ಎಂದು ನಿಯಮವನ್ನು ಹಾಕಿದೆ. ಅದಲ್ಲದೇ, ಬಹಳಷ್ಟು ಮಳಿಗೆಗಳಲ್ಲಿ ಅಕ್ಕಿ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. 25 ಕೆಜಿ ಅಕ್ಕಿ ಮೂಟೆಗೆ 22 ಡಾಲರ್‌ಗಳಿಗಿಂತ ಕಡಿಮೆ ಬೆಲೆ ಇತ್ತು.ಆದರೆ, ಈಗ ಅದರ ದರ 32 ರಿಂದ 47 ಡಾಲರ್‌ವರೆಗೆ ಏರಿಕೆ ಆಗಿದೆ.

ಈಗ ಕೇಂದ್ರದ ಈ ನಿರ್ಧಾರದಿಂದ ಅಮೆರಿಕದ  ಭಾರತೀಯರಲ್ಲಿ ಭಾರೀ ಸಂಚಲನ ಮೂಡಿದೆ. ಅಕ್ಕಿಗೆ ಏನು ಮಾಡುವುದು  ಎನ್ನುವ ಚಿಂತೆ ಕಾಡಿದೆ.

ಮಳೆಯ ಕೊರತೆಯಿಂದ  ಈ ಬಾರಿ ಮುಂಗಾರು ತಡವಾಗಿದೆ. ದೇಶದ ಹಲವೆಡೆ ಮಳೆ ವಿಳಂಬವಾಗಿದೆ. ಫೆಬ್ರವರಿ, ಮಾರ್ಚ್ ನಲ್ಲಿ ಸುರಿದ ಮಳೆಗೆ ಹಲವೆಡೆ ಬೆಳೆ ಹಾನಿಯಾಗಿದ್ದು, ಈ ಬಾರಿ ಇಳುವರಿ ಮೇಲೆ ಪರಿಣಾಮ ಬೀರುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಅಕ್ಕಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.ಇದರೊಂದಿಗೆ ಡಿಜಿಎಫ್‌ಟಿ  ಗುರುವಾರ ಅಧಿಸೂಚನೆ ಹೊರಡಿಸಿದ್ದು, ಭಾಗಶಃ ಮಿಲ್ ಮಾಡಿದ, ಸಂಪೂರ್ಣ ಮಿಲ್ ಮಾಡಿದ ಮತ್ತು ಬಿಳಿ ಅಕ್ಕಿಯ ರಫ್ತಿಗೆ ನಿಷೇಧ ಹೇರಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago