Advertisement
MIRROR FOCUS

#AsianGames2023 | ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗಳಿಗೆಯಲ್ಲಿ ನೂರರ ಗಡಿ ದಾಟಿದ ಭಾರತ | ಕ್ರೀಡಾಪಟುಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Share

ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್‌ ಕ್ರೀಡಾಕೂಟದಲ್ಲಿ#AsianGames2023 ಭಾರತ ನೂರು ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ಕ್ರೀಡಾಕೂಟದ 14ನೇ ದಿನದಂದು ಭಾರತದ ಮಹಿಳಾ ಕಬ್ಬಡಿ ತಂಡ ಚಿನ್ನ ಗೆಲ್ಲುವ ಮೂಲಕ ಪದಕಗಳ ಶತಕವನ್ನು ಪೂರೈಸಿತು. ಈ 14 ದಿನಗಳಲ್ಲಿ ಏಷ್ಯಾಡ್ ಪ್ರಯಾಣದಲ್ಲಿ ಭಾರತ ಇದುವರೆಗೆ ಒಟ್ಟು 100 ಪದಕಗಳನ್ನು ಗೆದ್ದಿದ್ದು, ಇದರಲ್ಲಿ 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಸೇರಿವೆ. ಏಷ್ಯನ್‌ ಗೇಮ್ಸ್‌ 2023ರ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ಚೊಚ್ಚಲ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.

ಆರ್ಚರಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಜ್ಯೋತಿ ವೆನ್ನಮ್ ದಿನವನ್ನು ಆರಂಭಿಸಿದರೆ, ಅದಿತಿ ಸ್ವಾಮಿ ಕಾಂಪೌಂಡ್ ಆರ್ಚರಿಯಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಶತಕ ಬಾರಿಸಿದ ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಪ್ರಧಾನಿ ಮೋದಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ. ಭಾರತದ ಈ ಸಾಧನೆಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿರುವ ಮೋದಿ, ‘ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿರುವುದು ಭಾತೀಯರು ರೋಮಾಂಚನಗೊಳ್ಳುವಂತೆ ಮಾಡಿದೆ. ಭಾರತದ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣರಾದ ನಮ್ಮ ಅಸಾಧಾರಣ ಕ್ರೀಡಾಪಟುಗಳಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಕ್ಟೋಬರ್ 10 ರಂದು ನಮ್ಮ ಏಷ್ಯನ್ ಗೇಮ್ಸ್ ತಂಡ ಮತ್ತು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಏಷ್ಯನ್‌ ಗೇಮ್ಸ್‌ 2023ರ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ಚೊಚ್ಚಲ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಶನಿವಾರ ಅಫ್ಘಾನಿಸ್ತಾನದ ವಿರುದ್ಧ ನಡೆದ ಫೈನಲ್‌ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಆದ್ರೆ ಟೀಂ ಇಂಡಿಯಾಉತ್ತಮ ರನ್‌ರೇಟ್‌ ಹೊಂದಿದ್ದರಿಂದ ಚಿನ್ನದ ಪದಕ ಗೆದ್ದುಕೊಂಡಿತು.  ಅಫ್ಘಾನಿಸ್ತಾನ ತಂಡ 2010 ಮತ್ತು 2014ರಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿತ್ತು. ಈ ಬಾರಿಯೂ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ತಲುಪಿದ್ದಾರೆ. ಇದಕ್ಕೂ ಮುನ್ನ ಭಾರತ ಮಹಿಳಾ ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆದ್ದಿತ್ತು. ಈಗ ರುತುರಾಜ್ ಗಾಯಕ್ವಾಡ್ ನೇತೃತ್ವದ ತಂಡ ಕೂಡ ಇದೇ ರೀತಿಯ ಯಶಸ್ಸನ್ನು ಸಾಧಿಸುವ ನಿರೀಕ್ಷೆಯಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

4 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

22 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago