Advertisement
MIRROR FOCUS

#AsianGames2023 | ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗಳಿಗೆಯಲ್ಲಿ ನೂರರ ಗಡಿ ದಾಟಿದ ಭಾರತ | ಕ್ರೀಡಾಪಟುಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Share

ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್‌ ಕ್ರೀಡಾಕೂಟದಲ್ಲಿ#AsianGames2023 ಭಾರತ ನೂರು ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ಕ್ರೀಡಾಕೂಟದ 14ನೇ ದಿನದಂದು ಭಾರತದ ಮಹಿಳಾ ಕಬ್ಬಡಿ ತಂಡ ಚಿನ್ನ ಗೆಲ್ಲುವ ಮೂಲಕ ಪದಕಗಳ ಶತಕವನ್ನು ಪೂರೈಸಿತು. ಈ 14 ದಿನಗಳಲ್ಲಿ ಏಷ್ಯಾಡ್ ಪ್ರಯಾಣದಲ್ಲಿ ಭಾರತ ಇದುವರೆಗೆ ಒಟ್ಟು 100 ಪದಕಗಳನ್ನು ಗೆದ್ದಿದ್ದು, ಇದರಲ್ಲಿ 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಸೇರಿವೆ. ಏಷ್ಯನ್‌ ಗೇಮ್ಸ್‌ 2023ರ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ಚೊಚ್ಚಲ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.

ಆರ್ಚರಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಜ್ಯೋತಿ ವೆನ್ನಮ್ ದಿನವನ್ನು ಆರಂಭಿಸಿದರೆ, ಅದಿತಿ ಸ್ವಾಮಿ ಕಾಂಪೌಂಡ್ ಆರ್ಚರಿಯಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಶತಕ ಬಾರಿಸಿದ ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಪ್ರಧಾನಿ ಮೋದಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ. ಭಾರತದ ಈ ಸಾಧನೆಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿರುವ ಮೋದಿ, ‘ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿರುವುದು ಭಾತೀಯರು ರೋಮಾಂಚನಗೊಳ್ಳುವಂತೆ ಮಾಡಿದೆ. ಭಾರತದ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣರಾದ ನಮ್ಮ ಅಸಾಧಾರಣ ಕ್ರೀಡಾಪಟುಗಳಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಕ್ಟೋಬರ್ 10 ರಂದು ನಮ್ಮ ಏಷ್ಯನ್ ಗೇಮ್ಸ್ ತಂಡ ಮತ್ತು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

Advertisement

ಏಷ್ಯನ್‌ ಗೇಮ್ಸ್‌ 2023ರ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ಚೊಚ್ಚಲ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಶನಿವಾರ ಅಫ್ಘಾನಿಸ್ತಾನದ ವಿರುದ್ಧ ನಡೆದ ಫೈನಲ್‌ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಆದ್ರೆ ಟೀಂ ಇಂಡಿಯಾಉತ್ತಮ ರನ್‌ರೇಟ್‌ ಹೊಂದಿದ್ದರಿಂದ ಚಿನ್ನದ ಪದಕ ಗೆದ್ದುಕೊಂಡಿತು.  ಅಫ್ಘಾನಿಸ್ತಾನ ತಂಡ 2010 ಮತ್ತು 2014ರಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿತ್ತು. ಈ ಬಾರಿಯೂ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ತಲುಪಿದ್ದಾರೆ. ಇದಕ್ಕೂ ಮುನ್ನ ಭಾರತ ಮಹಿಳಾ ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆದ್ದಿತ್ತು. ಈಗ ರುತುರಾಜ್ ಗಾಯಕ್ವಾಡ್ ನೇತೃತ್ವದ ತಂಡ ಕೂಡ ಇದೇ ರೀತಿಯ ಯಶಸ್ಸನ್ನು ಸಾಧಿಸುವ ನಿರೀಕ್ಷೆಯಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

21 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

24 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago