ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ, ಕೈಗೆಟಕುವ ದರ ಹಾಗೂ ಸುಸ್ಥಿರತೆಯ ಅಂಶಗಳನ್ನು ಯಶಸ್ವಿಯಾಗಿ ದಾಟಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ದೆಹಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಅವರು, ಭಾರತ ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಗುಂಪನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಹೈಡ್ರೋಕಾರ್ಬನ್ ಪರಿಶೋಧನೆ ಹಾಗೂ ಪರವಾನಗಿ ನೀತಿ ವ್ಯವಸ್ಥೆಯ 10ನೇ ಸುತ್ತಿನ ಬಿಡ್ಡಿಂಗ್ ಅಡಿ ಸರ್ಕಾರ 2 ಲಕ್ಷ ಚದರ ಕಿಲೋ ಮೀಟರ್ ಗಳಿಂತಲೂ ಹೆಚ್ಚು ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಗಳಿಗಾಗಿ ಅನ್ವೇಷಿಸುತ್ತಿದೆ ಎಂದು ಹೇಳಿದರು. ಈ ವರ್ಷದ ಅಂತ್ಯದ ವೇಳೆಗೆ ಪರಿಶೋಧನಾ ಪ್ರದೇಶವನ್ನು 0.5 ಮಿಲಿಯನ್ ಕಿಲೋ ಮೀಟರ್ ಗೆ, 2030ರ ವೇಳೆಗೆ ಒಂದು ಮಿಲಿಯನ್ ಚದರ ಕಿಲೋ ಮೀಟರ್ ಗೆ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…