ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ, ಕೈಗೆಟಕುವ ದರ ಹಾಗೂ ಸುಸ್ಥಿರತೆಯ ಅಂಶಗಳನ್ನು ಯಶಸ್ವಿಯಾಗಿ ದಾಟಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ದೆಹಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಅವರು, ಭಾರತ ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಗುಂಪನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಹೈಡ್ರೋಕಾರ್ಬನ್ ಪರಿಶೋಧನೆ ಹಾಗೂ ಪರವಾನಗಿ ನೀತಿ ವ್ಯವಸ್ಥೆಯ 10ನೇ ಸುತ್ತಿನ ಬಿಡ್ಡಿಂಗ್ ಅಡಿ ಸರ್ಕಾರ 2 ಲಕ್ಷ ಚದರ ಕಿಲೋ ಮೀಟರ್ ಗಳಿಂತಲೂ ಹೆಚ್ಚು ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಗಳಿಗಾಗಿ ಅನ್ವೇಷಿಸುತ್ತಿದೆ ಎಂದು ಹೇಳಿದರು. ಈ ವರ್ಷದ ಅಂತ್ಯದ ವೇಳೆಗೆ ಪರಿಶೋಧನಾ ಪ್ರದೇಶವನ್ನು 0.5 ಮಿಲಿಯನ್ ಕಿಲೋ ಮೀಟರ್ ಗೆ, 2030ರ ವೇಳೆಗೆ ಒಂದು ಮಿಲಿಯನ್ ಚದರ ಕಿಲೋ ಮೀಟರ್ ಗೆ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…