ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ, ಕೈಗೆಟಕುವ ದರ ಹಾಗೂ ಸುಸ್ಥಿರತೆಯ ಅಂಶಗಳನ್ನು ಯಶಸ್ವಿಯಾಗಿ ದಾಟಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ದೆಹಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಅವರು, ಭಾರತ ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಗುಂಪನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಹೈಡ್ರೋಕಾರ್ಬನ್ ಪರಿಶೋಧನೆ ಹಾಗೂ ಪರವಾನಗಿ ನೀತಿ ವ್ಯವಸ್ಥೆಯ 10ನೇ ಸುತ್ತಿನ ಬಿಡ್ಡಿಂಗ್ ಅಡಿ ಸರ್ಕಾರ 2 ಲಕ್ಷ ಚದರ ಕಿಲೋ ಮೀಟರ್ ಗಳಿಂತಲೂ ಹೆಚ್ಚು ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಗಳಿಗಾಗಿ ಅನ್ವೇಷಿಸುತ್ತಿದೆ ಎಂದು ಹೇಳಿದರು. ಈ ವರ್ಷದ ಅಂತ್ಯದ ವೇಳೆಗೆ ಪರಿಶೋಧನಾ ಪ್ರದೇಶವನ್ನು 0.5 ಮಿಲಿಯನ್ ಕಿಲೋ ಮೀಟರ್ ಗೆ, 2030ರ ವೇಳೆಗೆ ಒಂದು ಮಿಲಿಯನ್ ಚದರ ಕಿಲೋ ಮೀಟರ್ ಗೆ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…