ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ, ಕೈಗೆಟಕುವ ದರ ಹಾಗೂ ಸುಸ್ಥಿರತೆಯ ಅಂಶಗಳನ್ನು ಯಶಸ್ವಿಯಾಗಿ ದಾಟಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ದೆಹಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಅವರು, ಭಾರತ ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಗುಂಪನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಹೈಡ್ರೋಕಾರ್ಬನ್ ಪರಿಶೋಧನೆ ಹಾಗೂ ಪರವಾನಗಿ ನೀತಿ ವ್ಯವಸ್ಥೆಯ 10ನೇ ಸುತ್ತಿನ ಬಿಡ್ಡಿಂಗ್ ಅಡಿ ಸರ್ಕಾರ 2 ಲಕ್ಷ ಚದರ ಕಿಲೋ ಮೀಟರ್ ಗಳಿಂತಲೂ ಹೆಚ್ಚು ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಗಳಿಗಾಗಿ ಅನ್ವೇಷಿಸುತ್ತಿದೆ ಎಂದು ಹೇಳಿದರು. ಈ ವರ್ಷದ ಅಂತ್ಯದ ವೇಳೆಗೆ ಪರಿಶೋಧನಾ ಪ್ರದೇಶವನ್ನು 0.5 ಮಿಲಿಯನ್ ಕಿಲೋ ಮೀಟರ್ ಗೆ, 2030ರ ವೇಳೆಗೆ ಒಂದು ಮಿಲಿಯನ್ ಚದರ ಕಿಲೋ ಮೀಟರ್ ಗೆ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…