ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

March 15, 2026
10:00 PM
ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ ಸಂಗ್ರಹ ಕಳೆದ ವರ್ಷಕ್ಕಿಂತ ದ್ವಿಗುಣವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಮುಂಬರುವ ಮುಂಗಾರು (ಖಾರೀಫ್‌) ಬೆಳೆ ಋತುವಿನ ಹಿನ್ನೆಲೆಯಲ್ಲಿ ಭಾರತದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ರೈತರಿಗೆ ಯಾವುದೇ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ದೆಹಲಿ‌ನಲ್ಲಿ ನಡೆದ ಅಂತರ ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ದೇಶದಲ್ಲಿ ಯೂರಿಯಾ ದಾಸ್ತಾನು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ದ್ವಿಗುಣ ಪ್ರಮಾಣದಲ್ಲಿ ಸಂಗ್ರಹಿಸಲಾಗಿದೆ ಎಂದು ಹೇಳಿದರು. ಜೊತೆಗೆ ಸಾರಜನಕ (N), ರಂಜಕ (P) ಮತ್ತು ಪೋಟಾಶಿಯಂ (K) ರಸಗೊಬ್ಬರಗಳ ಲಭ್ಯತೆಯೂ ಹೆಚ್ಚುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮೇ ಮಧ್ಯಭಾಗಕ್ಕೆ ಗರಿಷ್ಠ ಬೇಡಿಕೆ ನಿರೀಕ್ಷೆ :  ಖಾರೀಫ್‌ ಬೆಳೆಗಾಲದಲ್ಲಿ ಸಾಮಾನ್ಯವಾಗಿ ಮೇ 15ರ ವೇಳೆಗೆ ರಸಗೊಬ್ಬರ ಬೇಡಿಕೆ ಗರಿಷ್ಠ ಮಟ್ಟ ತಲುಪುವ ಹಿನ್ನೆಲೆಯಲ್ಲಿ ಸರ್ಕಾರ ಮುಂಚಿತವಾಗಿ ದಾಸ್ತಾನುಗಳನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ. ಇದರಿಂದ ಬಿತ್ತನೆ ಅವಧಿಯಲ್ಲಿ ರೈತರಿಗೆ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲಾಗುತ್ತಿದೆ.

ಜಾಗತಿಕ-ದೇಶೀಯ ಪ್ರವೃತ್ತಿಗಳ ಮೇಲೆ ಕಣ್ಣಿಟ್ಟ ಇಲಾಖೆ :  ರಸಗೊಬ್ಬರ ಇಲಾಖೆ ಜಾಗತಿಕ ಮಾರುಕಟ್ಟೆ ಸ್ಥಿತಿ ಹಾಗೂ ದೇಶೀಯ ಬಳಕೆ ಪ್ರವೃತ್ತಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ ಆಮದು, ವಿತರಣೆ ಮತ್ತು ಸಂಗ್ರಹ ನಿರ್ವಹಣೆಗೆ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಲಾಗಿದೆ.

ಕೃಷಿ ಉತ್ಪಾದನೆ ಸ್ಥಿರವಾಗಿರಲು ಮತ್ತು ಆಹಾರ ಭದ್ರತೆ ದೃಷ್ಟಿಯಿಂದ ರಸಗೊಬ್ಬರ ಸರಬರಾಜು ವ್ಯವಸ್ಥೆ ಬಲಪಡಿಸುವುದು ಪ್ರಮುಖ ಆದ್ಯತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

India has significantly increased fertilizer stocks, including doubling urea reserves, ahead of the upcoming Kharif cropping season. The government aims to ensure smooth supply during peak demand in mid-May while closely monitoring global and domestic market trends.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror