MIRROR FOCUS

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ | ಆಧುನಿಕ ತಂತ್ರಜ್ಞಾನಕ್ಕೆ ಸಾಕ್ಷಿಯಾಗಿರುವ ಪಂಬನ್‌ ಸೇತುವೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಮೇಶ್ವರಂನಲ್ಲಿ ಲೋಕಾರ್ಪಣೆಗೊಂಡ ಪಂಬನ್‌ ಸೇತುವೆ ಸಾಕಷ್ಟು ವಿಶೇಷತೆಗಳನ್ನು ಒಳಗೊಂಡಿದೆ. ಈ ಸೇತುವೆ ತಮಿಳುನಾಡಿನ ಹೆಗ್ಗುರುತಾಗಲಿದ್ದು, ಜನರಿಗೂ ಅನುಕೂಲವಾಗಲಿದೆ. ಅಂತೆಯೇ ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆಗೊಂಡಿದೆ.……..ಮುಂದೆ ಓದಿ…..

Advertisement

ರಾಮೇಶ್ವರಂ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಂಬನ್ ಬ್ರಿಡ್ಜ್‌ ನಿರ್ಮಿಸಲಾಗಿದೆ. ಇದು ದೇಶದಲ್ಲಿ ಮತ್ತೊಂದು ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿಯಾಗಿದೆ. ಸಮುದ್ರದಲ್ಲಿ ನಿರ್ಮಿಸಲಾದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇದಾಗಿದ್ದು, ಇದು ಹಲವು ವಿಶೇಷತೆಗಳನ್ನು ಒಳಗೊಂಡಿದೆ.  ತಮಿಳುನಾಡಿನ ಮಂಟಪಂ ನಿಂದ ರಾಮೇಶ್ವರಂ ದ್ವೀಪವನ್ನು ಸಂಪರ್ಕಿಸಲು ಆಧುನಿಕ ಸ್ಪರ್ಶದಿಂದ ಇದನ್ನು ನಿರ್ಮಿಸಲಾಗಿದೆ.

111 ವರ್ಷಗಳ ಹಿಂದೆ ಇಲ್ಲಿ ನಿರ್ಮಿಸಿದ್ದ ಹಳೆಯ ಸೇತುವೆ ಶಿಥಿಲಗೊಂಡು ಅವಧಿ ಮುಗಿದಿದ್ದರಿಂದ ಅದರ ಪಕ್ಕದಲ್ಲಿಯೇ ಈ ಹೊಸ ಸೇತುವೆಯನ್ನು ನಿರ್ಮಿಸಲಾಗಿದೆ. ಈ ಮೊದಲು 2050 ಮೀಟರ್ ಉದ್ದದ ಹಳೆಯ ಪಂಬನ್ ಸಮುದ್ರ ಸೇತುವೆಯನ್ನು 1911 ಮತ್ತು 1913 ರ ನಡುವೆ ನಿರ್ಮಿಸಲಾಗಿತ್ತು . ಆದರೆ, ಈ ಸೇತುವೆ ತುಕ್ಕು ಹಿಡಿದ ಕಾರಣ, ಭದ್ರತಾ ದೃಷ್ಟಿಯಿಂದ ಕಳೆದ 2022 ರ ಡಿಸೆಂಬರ್‌ನಿಂದ ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅಂದಿನಿಂದ ರಾಮೇಶ್ವರಂಗೆ ಬರುವ ಭಕ್ತರು, ಧನುಷ್ಕೋಡಿಗೆ ಭೇಟಿ ನೀಡುವ ಪ್ರವಾಸಿಗರು, ರಾಮೇಶ್ವರಂಗೆ ಸಂಚರಿಸುವವರು ಸಂಪೂರ್ಣವಾಗಿ ರಸ್ತೆ ಸಂಚಾರವನ್ನೇ ಅವಲಂಬಿಸಬೇಕಿತ್ತು.

ದಕ್ಷಿಣ ರೈಲ್ವೆಯು ರೈಲು ವಿಕಾಸ ನಿಗಮ ಸಹಯೋಗದೊಂದಿಗೆ 531 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ರೈಲು ಸೇತುವೆ ನಿರ್ಮಿಸಿದೆ. ಈ ವರ್ಟಿಕಲ್ ರೈಲ್ವೆ ಬ್ರಿಡ್ಜ್‌ ಭಾರತೀಯ ರೈಲ್ವೆ ಇತಿಹಾಸದಲ್ಲಿಯೇ ಒಂದು ಮೈಲುಗಲ್ಲಾಗಿದೆ.‌ ನೂತನ ರೈಲ್ವೆ ಸೇತುವೆ‌ 2.10 ಕಿಲೋ ಮೀಟರ್ ಉದ್ದವಿದೆ. ಇದರಲ್ಲಿನ ಲಂಬ ಸೇತುವೆ 72.5 ಮೀಟರ್ ಉದ್ದವಿದ್ದು, ಬೋಟ್ ಬಂದಾಗ 17 ಮೀಟರ್ ಎತ್ತರಕ್ಕೆ ಮೇಲಕ್ಕೆ ಏರಿಸಲಾಗುತ್ತದೆ.  ಸದ್ಯಕ್ಕೆ ಈ ಸೇತುವೆ ಮೇಲೆ‌ ಏಕಪಥ ಇಲೆಕ್ಟ್ರಿಫಿಕೇಶನ್ ಮಾರ್ಗ ಇದ್ದು, ಭವಿಷ್ಯದಲ್ಲಿ ದ್ವಿಪಥ ಮಾರ್ಗ ನಿರ್ಮಾಣಕ್ಕೂ ಬೇಕಾದ ಸೌಲಭ್ಯ ಒದಗಿಸಲಾಗಿದೆ. ವರ್ಟಿಕಲ್ ಲಿಪ್ಟ್ ಮಾಡುವ ವ್ಯವಸ್ಥೆ ಇದ್ದು, ದೊಡ್ಡ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ರೈಲ್ವೆ ಟ್ರ್ಯಾಕ್ ಸೇರಿದಂತೆ ಈ ಸೇತುವೆಯ ತೂಕ 660 ಮೆಟ್ರಿಕ್ ಟನ್ ಇದೆ. ವರ್ಟಿಕಲ್ ರೈಲ್ವೆ ಬ್ರಿಡ್ಜ್ ಮೇಲಕ್ಕೆ ಎತ್ತಲು 5.30 ನಿಮಿಷಗಳನ್ನು ತೆಗೆದುಕೊಳ್ಳುವುದರಿಂದ ಹಡಗು ಸಾಗಾಟ ಸಮಯ ಉಳಿತಾಯವಾಗಲಿದೆ. ಹೊಸ ಸೇತುವೆಯನ್ನು ನಿರ್ಮಿಸಲು ಐದು ವರ್ಷಗಳು ತೆಗೆದುಕೊಂಡಿವೆ. ಸುಧಾರಿತ ತಂತ್ರಜ್ಞಾನ ಮತ್ತು ವಿಶಿಷ್ಟ ವಿನ್ಯಾಸದಿಂದಲೇ ಈ ಸೇತುವೆ  ಗಮನ ಸಳೆಯುತ್ತಿದೆ.

Advertisement

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

7 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

8 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

12 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago