Advertisement
MIRROR FOCUS

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ | ಆಧುನಿಕ ತಂತ್ರಜ್ಞಾನಕ್ಕೆ ಸಾಕ್ಷಿಯಾಗಿರುವ ಪಂಬನ್‌ ಸೇತುವೆ |

Share

ರಾಮೇಶ್ವರಂನಲ್ಲಿ ಲೋಕಾರ್ಪಣೆಗೊಂಡ ಪಂಬನ್‌ ಸೇತುವೆ ಸಾಕಷ್ಟು ವಿಶೇಷತೆಗಳನ್ನು ಒಳಗೊಂಡಿದೆ. ಈ ಸೇತುವೆ ತಮಿಳುನಾಡಿನ ಹೆಗ್ಗುರುತಾಗಲಿದ್ದು, ಜನರಿಗೂ ಅನುಕೂಲವಾಗಲಿದೆ. ಅಂತೆಯೇ ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆಗೊಂಡಿದೆ.……..ಮುಂದೆ ಓದಿ…..

ರಾಮೇಶ್ವರಂ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಂಬನ್ ಬ್ರಿಡ್ಜ್‌ ನಿರ್ಮಿಸಲಾಗಿದೆ. ಇದು ದೇಶದಲ್ಲಿ ಮತ್ತೊಂದು ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿಯಾಗಿದೆ. ಸಮುದ್ರದಲ್ಲಿ ನಿರ್ಮಿಸಲಾದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇದಾಗಿದ್ದು, ಇದು ಹಲವು ವಿಶೇಷತೆಗಳನ್ನು ಒಳಗೊಂಡಿದೆ.  ತಮಿಳುನಾಡಿನ ಮಂಟಪಂ ನಿಂದ ರಾಮೇಶ್ವರಂ ದ್ವೀಪವನ್ನು ಸಂಪರ್ಕಿಸಲು ಆಧುನಿಕ ಸ್ಪರ್ಶದಿಂದ ಇದನ್ನು ನಿರ್ಮಿಸಲಾಗಿದೆ.

111 ವರ್ಷಗಳ ಹಿಂದೆ ಇಲ್ಲಿ ನಿರ್ಮಿಸಿದ್ದ ಹಳೆಯ ಸೇತುವೆ ಶಿಥಿಲಗೊಂಡು ಅವಧಿ ಮುಗಿದಿದ್ದರಿಂದ ಅದರ ಪಕ್ಕದಲ್ಲಿಯೇ ಈ ಹೊಸ ಸೇತುವೆಯನ್ನು ನಿರ್ಮಿಸಲಾಗಿದೆ. ಈ ಮೊದಲು 2050 ಮೀಟರ್ ಉದ್ದದ ಹಳೆಯ ಪಂಬನ್ ಸಮುದ್ರ ಸೇತುವೆಯನ್ನು 1911 ಮತ್ತು 1913 ರ ನಡುವೆ ನಿರ್ಮಿಸಲಾಗಿತ್ತು . ಆದರೆ, ಈ ಸೇತುವೆ ತುಕ್ಕು ಹಿಡಿದ ಕಾರಣ, ಭದ್ರತಾ ದೃಷ್ಟಿಯಿಂದ ಕಳೆದ 2022 ರ ಡಿಸೆಂಬರ್‌ನಿಂದ ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅಂದಿನಿಂದ ರಾಮೇಶ್ವರಂಗೆ ಬರುವ ಭಕ್ತರು, ಧನುಷ್ಕೋಡಿಗೆ ಭೇಟಿ ನೀಡುವ ಪ್ರವಾಸಿಗರು, ರಾಮೇಶ್ವರಂಗೆ ಸಂಚರಿಸುವವರು ಸಂಪೂರ್ಣವಾಗಿ ರಸ್ತೆ ಸಂಚಾರವನ್ನೇ ಅವಲಂಬಿಸಬೇಕಿತ್ತು.

ದಕ್ಷಿಣ ರೈಲ್ವೆಯು ರೈಲು ವಿಕಾಸ ನಿಗಮ ಸಹಯೋಗದೊಂದಿಗೆ 531 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ರೈಲು ಸೇತುವೆ ನಿರ್ಮಿಸಿದೆ. ಈ ವರ್ಟಿಕಲ್ ರೈಲ್ವೆ ಬ್ರಿಡ್ಜ್‌ ಭಾರತೀಯ ರೈಲ್ವೆ ಇತಿಹಾಸದಲ್ಲಿಯೇ ಒಂದು ಮೈಲುಗಲ್ಲಾಗಿದೆ.‌ ನೂತನ ರೈಲ್ವೆ ಸೇತುವೆ‌ 2.10 ಕಿಲೋ ಮೀಟರ್ ಉದ್ದವಿದೆ. ಇದರಲ್ಲಿನ ಲಂಬ ಸೇತುವೆ 72.5 ಮೀಟರ್ ಉದ್ದವಿದ್ದು, ಬೋಟ್ ಬಂದಾಗ 17 ಮೀಟರ್ ಎತ್ತರಕ್ಕೆ ಮೇಲಕ್ಕೆ ಏರಿಸಲಾಗುತ್ತದೆ.  ಸದ್ಯಕ್ಕೆ ಈ ಸೇತುವೆ ಮೇಲೆ‌ ಏಕಪಥ ಇಲೆಕ್ಟ್ರಿಫಿಕೇಶನ್ ಮಾರ್ಗ ಇದ್ದು, ಭವಿಷ್ಯದಲ್ಲಿ ದ್ವಿಪಥ ಮಾರ್ಗ ನಿರ್ಮಾಣಕ್ಕೂ ಬೇಕಾದ ಸೌಲಭ್ಯ ಒದಗಿಸಲಾಗಿದೆ. ವರ್ಟಿಕಲ್ ಲಿಪ್ಟ್ ಮಾಡುವ ವ್ಯವಸ್ಥೆ ಇದ್ದು, ದೊಡ್ಡ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ರೈಲ್ವೆ ಟ್ರ್ಯಾಕ್ ಸೇರಿದಂತೆ ಈ ಸೇತುವೆಯ ತೂಕ 660 ಮೆಟ್ರಿಕ್ ಟನ್ ಇದೆ. ವರ್ಟಿಕಲ್ ರೈಲ್ವೆ ಬ್ರಿಡ್ಜ್ ಮೇಲಕ್ಕೆ ಎತ್ತಲು 5.30 ನಿಮಿಷಗಳನ್ನು ತೆಗೆದುಕೊಳ್ಳುವುದರಿಂದ ಹಡಗು ಸಾಗಾಟ ಸಮಯ ಉಳಿತಾಯವಾಗಲಿದೆ. ಹೊಸ ಸೇತುವೆಯನ್ನು ನಿರ್ಮಿಸಲು ಐದು ವರ್ಷಗಳು ತೆಗೆದುಕೊಂಡಿವೆ. ಸುಧಾರಿತ ತಂತ್ರಜ್ಞಾನ ಮತ್ತು ವಿಶಿಷ್ಟ ವಿನ್ಯಾಸದಿಂದಲೇ ಈ ಸೇತುವೆ  ಗಮನ ಸಳೆಯುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

17 hours ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

21 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

21 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

1 day ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

2 days ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

3 days ago