Advertisement
MIRROR FOCUS

#Bharat | ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುತ್ತಿರುವ ಭಾರತ | 50 ವರ್ಷದಲ್ಲಿ ಆಗೋದನ್ನು ಆರೇ ವರ್ಷದಲ್ಲಿ ಸಾಧಿಸಿದ ಭಾರತ | ವಿಶ್ವಬ್ಯಾಂಕ್‌ನಿಂದ ಶ್ಲಾಘನೆ |

Share

ಭಾರತ #Bharat (India) ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಂಗಿಂತಲೂ ಭಾರತ ಹೆಚ್ಚಾಗಿ ಬೆಳವಣಿಗೆಯನ್ನು ಕಾಣುತ್ತಿದೆ. ಭಾರತದ ಡಿಜಿಟಿಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್ ಅಥವಾ ಸಾರ್ವಜನಿಕ ಡಿಜಿಟಲ್ ಸೌಕರ್ಯ ವ್ಯವಸ್ಥೆ ಬಗ್ಗೆ ವಿಶ್ವಬ್ಯಾಂಕ್ ಪ್ರಶಂಸೆ ವ್ಯಕ್ತಪಡಿಸಿದೆ. ಜಿ20 ಸಭೆಗಾಗಿ ಸಿದ್ಧಪಡಿಸಿದ ದಾಖಲೆಯೊಂದರಲ್ಲಿ ವಿಶ್ವಬ್ಯಾಂಕ್ World Bank, ಭಾರತದಲ್ಲಿ ಡಿಪಿಐಗಳ ಪಾತ್ರದ ಬಗ್ಗೆ ಪ್ರಸ್ತಾಪಿಸುತ್ತಾ ಕಳೆದ 6 ವರ್ಷದಲ್ಲಿ ಆಗಿರುವ ಪ್ರಗತಿಯನ್ನು ಶ್ಲಾಘಿಸಿದೆ.

Advertisement
Advertisement

ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿ ವಿಚಾರದಲ್ಲಿ ಐದು ದಶಕದಲ್ಲಿ ಆಗುವಂಥದ್ದನ್ನು ಭಾರತ ಕೇವಲ 6 ವರ್ಷದಲ್ಲಿ ಸಾಧಿಸಿದೆ ಎಂದು ಹೇಳಿದೆ. ಇನ್ನು, ಡಿಪಿಐನಲ್ಲಿ ಪ್ರಮುಖ ಭಾಗ ಎನಿಸಿರುವ ಜನ್ ಧನ್ ಯೋಜನೆ, ಆಧಾರ್ ಮತ್ತು ಮೊಬೈಲ್ ನಂಬರ್​ಗಳ ಸಂಯೋಜನೆಯ ಪಾತ್ರವನ್ನು ವಿಶ್ವಬ್ಯಾಂಕ್ ಗುರುತಿಸಿದೆ. ಹಣಕಾಸು ಒಳಗೊಳ್ಳುವಿಕೆಯ #FinancialInclusion ಪ್ರಗತಿಗೆ ಈ ಮೂರು ಅಂಶಗಳು ಬಹಳ ಮುಖ್ಯ ಎನಿಸಿವೆ. ಹಣಕಾಸು ಒಳಗೊಳ್ಳುವಿಕೆ ದರ 2008ರಲ್ಲಿ ಶೇ. 25ರಷ್ಟು ಇದ್ದದ್ದು ಕಳೆದ 6 ವರ್ಷದಲ್ಲಿ ಶೇ. 80ಕ್ಕೆ ಏರಿದೆ. ಇಷ್ಟ ಸಾಧಿಸಲು ಬೇಕಾಗಿದ್ದ ಅವಧಿ 47 ವರ್ಷಗಳಷ್ಟು ಕಡಿಮೆ ಆಗಿದೆ. ಇದಕ್ಕೆ ಭಾರತದ ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್ ಪ್ರಗತಿ ಕಾರಣ ಎಂದು ವಿಶ್ವ ಬ್ಯಾಂಕ್ ಅಭಿಪ್ರಾಯಪಟ್ಟಿದೆ.

ಜಿ20 G20 ಗ್ರೋಬಲ್ ಪಾರ್ಟ್ನರ್​ಶಿಪ್ ಫಾರ್ ಫೈನಾನ್ಷಿಯಲ್ ಇನ್​ಕ್ಲೂಶನ್ ಎಂಬ ದಾಖಲೆಯಲ್ಲಿ ವಿಶ್ವಬ್ಯಾಂಕ್ ಹಲವು ಸಂಗತಿಗಳನ್ನು ಪ್ರಸ್ತಾಪಿಸಿ, ಭಾರತದ ಸಾಧನೆಯನ್ನು ಕೊಂಡಾಡಿದೆ. ‘ಕಳೆದ ದಶಕದಲ್ಲಿ ಡಿಪಿಐ ವ್ಯವಸ್ಥೆಯನ್ನು ಬಳಸಿ ವಿಶ್ವದ ಅತಿದೊಡ್ಡ ಡಿಜಿಟಲ್ ಗವರ್ನ್ಮೆಂಟ್ ಟು ಪರ್ಸನ್ (ಜಿ2ಪಿ) ಆರ್ಕಿಟೆಕ್ಚರ್ ಅನ್ನು ನಿರ್ಮಿಸಿದೆ. 53 ಕೇಂದ್ರ ಸಚಿವಾಲಯಗಳ 312 ಪ್ರಮುಖ ಯೋಜನೆಗಳ ಫಲಾನುಭವಿಗಳಿಗೆ 361 ಬಿಲಿಯನ್ ಡಾಲರ್​ನಷ್ಟು ಹಣವನ್ನು ವರ್ಗಾಯಿಸಲು ಇದು ಸಾಧ್ಯವಾಗಿಸಿದೆ. 2022ರ ಮಾರ್ಚ್​ವರೆಗಿನ ಅಂಕಿ ಅಂಶ ನೋಡಿದಾಗ ಈ ವ್ಯವಸ್ಥೆಯಿಂದಾಗಿ 33 ಬಿಲಿಯನ್ ಡಾಲರ್​ಷ್ಟು ಹಣದ ಉಳಿತಾಯವಾಗಿದೆ. ಇಷ್ಟು ಹಣವು ಜಿಡಿಪಿಯ ಶೇ. 1.14ರಷ್ಟಾಗುತ್ತದೆ’ ಎಂದು ವಿಶ್ವಬ್ಯಾಂಕ್ ತನ್ನ ಜಿ20 ದಾಖಲೆಯಲ್ಲಿ ಬರೆದಿದೆ.

ಈ ಬಾರಿಯ ಜಿ20 ಸಭೆ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ. ಈ ವರ್ಷಾದ್ಯಂತ ವಿವಿಧೆಡೆ ಪೂರಕ ಸಭೆಗಳು ನಡೆದಿದ್ದು, ಅಂತಿಮ ಶೃಂಗಸಭೆ ನವದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ. ವಿಶ್ವದ 19 ಅತಿದೊಡ್ಡ ಆರ್ಥಿಕತೆಯ ದೇಶಗಳು, ಐರೋಪ್ಯ ಒಕ್ಕೂಟ ಹಾಗೂ ಆಹ್ವಾನಿ ಅತಿಥಿ ದೇಶಗಳ ನಾಯಕರು, ಹಾಗೂ 12 ಅಂತಾರಾಷ್ಟ್ರೀಯ ಸಂಘಟನೆಗಳ ಮುಖ್ಯಸ್ಥರು ಈ ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

6 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

7 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

7 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

7 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

7 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

8 hours ago