Advertisement
MIRROR FOCUS

#Bharat | ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುತ್ತಿರುವ ಭಾರತ | 50 ವರ್ಷದಲ್ಲಿ ಆಗೋದನ್ನು ಆರೇ ವರ್ಷದಲ್ಲಿ ಸಾಧಿಸಿದ ಭಾರತ | ವಿಶ್ವಬ್ಯಾಂಕ್‌ನಿಂದ ಶ್ಲಾಘನೆ |

Share

ಭಾರತ #Bharat (India) ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಂಗಿಂತಲೂ ಭಾರತ ಹೆಚ್ಚಾಗಿ ಬೆಳವಣಿಗೆಯನ್ನು ಕಾಣುತ್ತಿದೆ. ಭಾರತದ ಡಿಜಿಟಿಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್ ಅಥವಾ ಸಾರ್ವಜನಿಕ ಡಿಜಿಟಲ್ ಸೌಕರ್ಯ ವ್ಯವಸ್ಥೆ ಬಗ್ಗೆ ವಿಶ್ವಬ್ಯಾಂಕ್ ಪ್ರಶಂಸೆ ವ್ಯಕ್ತಪಡಿಸಿದೆ. ಜಿ20 ಸಭೆಗಾಗಿ ಸಿದ್ಧಪಡಿಸಿದ ದಾಖಲೆಯೊಂದರಲ್ಲಿ ವಿಶ್ವಬ್ಯಾಂಕ್ World Bank, ಭಾರತದಲ್ಲಿ ಡಿಪಿಐಗಳ ಪಾತ್ರದ ಬಗ್ಗೆ ಪ್ರಸ್ತಾಪಿಸುತ್ತಾ ಕಳೆದ 6 ವರ್ಷದಲ್ಲಿ ಆಗಿರುವ ಪ್ರಗತಿಯನ್ನು ಶ್ಲಾಘಿಸಿದೆ.

ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿ ವಿಚಾರದಲ್ಲಿ ಐದು ದಶಕದಲ್ಲಿ ಆಗುವಂಥದ್ದನ್ನು ಭಾರತ ಕೇವಲ 6 ವರ್ಷದಲ್ಲಿ ಸಾಧಿಸಿದೆ ಎಂದು ಹೇಳಿದೆ. ಇನ್ನು, ಡಿಪಿಐನಲ್ಲಿ ಪ್ರಮುಖ ಭಾಗ ಎನಿಸಿರುವ ಜನ್ ಧನ್ ಯೋಜನೆ, ಆಧಾರ್ ಮತ್ತು ಮೊಬೈಲ್ ನಂಬರ್​ಗಳ ಸಂಯೋಜನೆಯ ಪಾತ್ರವನ್ನು ವಿಶ್ವಬ್ಯಾಂಕ್ ಗುರುತಿಸಿದೆ. ಹಣಕಾಸು ಒಳಗೊಳ್ಳುವಿಕೆಯ #FinancialInclusion ಪ್ರಗತಿಗೆ ಈ ಮೂರು ಅಂಶಗಳು ಬಹಳ ಮುಖ್ಯ ಎನಿಸಿವೆ. ಹಣಕಾಸು ಒಳಗೊಳ್ಳುವಿಕೆ ದರ 2008ರಲ್ಲಿ ಶೇ. 25ರಷ್ಟು ಇದ್ದದ್ದು ಕಳೆದ 6 ವರ್ಷದಲ್ಲಿ ಶೇ. 80ಕ್ಕೆ ಏರಿದೆ. ಇಷ್ಟ ಸಾಧಿಸಲು ಬೇಕಾಗಿದ್ದ ಅವಧಿ 47 ವರ್ಷಗಳಷ್ಟು ಕಡಿಮೆ ಆಗಿದೆ. ಇದಕ್ಕೆ ಭಾರತದ ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್ ಪ್ರಗತಿ ಕಾರಣ ಎಂದು ವಿಶ್ವ ಬ್ಯಾಂಕ್ ಅಭಿಪ್ರಾಯಪಟ್ಟಿದೆ.

ಜಿ20 G20 ಗ್ರೋಬಲ್ ಪಾರ್ಟ್ನರ್​ಶಿಪ್ ಫಾರ್ ಫೈನಾನ್ಷಿಯಲ್ ಇನ್​ಕ್ಲೂಶನ್ ಎಂಬ ದಾಖಲೆಯಲ್ಲಿ ವಿಶ್ವಬ್ಯಾಂಕ್ ಹಲವು ಸಂಗತಿಗಳನ್ನು ಪ್ರಸ್ತಾಪಿಸಿ, ಭಾರತದ ಸಾಧನೆಯನ್ನು ಕೊಂಡಾಡಿದೆ. ‘ಕಳೆದ ದಶಕದಲ್ಲಿ ಡಿಪಿಐ ವ್ಯವಸ್ಥೆಯನ್ನು ಬಳಸಿ ವಿಶ್ವದ ಅತಿದೊಡ್ಡ ಡಿಜಿಟಲ್ ಗವರ್ನ್ಮೆಂಟ್ ಟು ಪರ್ಸನ್ (ಜಿ2ಪಿ) ಆರ್ಕಿಟೆಕ್ಚರ್ ಅನ್ನು ನಿರ್ಮಿಸಿದೆ. 53 ಕೇಂದ್ರ ಸಚಿವಾಲಯಗಳ 312 ಪ್ರಮುಖ ಯೋಜನೆಗಳ ಫಲಾನುಭವಿಗಳಿಗೆ 361 ಬಿಲಿಯನ್ ಡಾಲರ್​ನಷ್ಟು ಹಣವನ್ನು ವರ್ಗಾಯಿಸಲು ಇದು ಸಾಧ್ಯವಾಗಿಸಿದೆ. 2022ರ ಮಾರ್ಚ್​ವರೆಗಿನ ಅಂಕಿ ಅಂಶ ನೋಡಿದಾಗ ಈ ವ್ಯವಸ್ಥೆಯಿಂದಾಗಿ 33 ಬಿಲಿಯನ್ ಡಾಲರ್​ಷ್ಟು ಹಣದ ಉಳಿತಾಯವಾಗಿದೆ. ಇಷ್ಟು ಹಣವು ಜಿಡಿಪಿಯ ಶೇ. 1.14ರಷ್ಟಾಗುತ್ತದೆ’ ಎಂದು ವಿಶ್ವಬ್ಯಾಂಕ್ ತನ್ನ ಜಿ20 ದಾಖಲೆಯಲ್ಲಿ ಬರೆದಿದೆ.

ಈ ಬಾರಿಯ ಜಿ20 ಸಭೆ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ. ಈ ವರ್ಷಾದ್ಯಂತ ವಿವಿಧೆಡೆ ಪೂರಕ ಸಭೆಗಳು ನಡೆದಿದ್ದು, ಅಂತಿಮ ಶೃಂಗಸಭೆ ನವದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ. ವಿಶ್ವದ 19 ಅತಿದೊಡ್ಡ ಆರ್ಥಿಕತೆಯ ದೇಶಗಳು, ಐರೋಪ್ಯ ಒಕ್ಕೂಟ ಹಾಗೂ ಆಹ್ವಾನಿ ಅತಿಥಿ ದೇಶಗಳ ನಾಯಕರು, ಹಾಗೂ 12 ಅಂತಾರಾಷ್ಟ್ರೀಯ ಸಂಘಟನೆಗಳ ಮುಖ್ಯಸ್ಥರು ಈ ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

3 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

10 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

10 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

1 day ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago