ಭಾರತದಲ್ಲಿ 100 ಮಿಲಿಯನ್ ಮಧುಮೇಹಿಗಳು…! | ಐಸಿಎಂಆರ್ ಅಧ್ಯಯನ

June 10, 2023
11:19 AM

ಇತ್ತೀಚಿನ ದಿನಗಳಲ್ಲಿ ಆರೋಗ್ಯ ರಕ್ಷಣೆಯೇ ದೊಡ್ಡ ಸಮಸ್ಯೆಯಾಗಿದೆ. ಪ್ರತಿ ಮನೆ ಮನೆಯಲ್ಲೂ ರೋಗಿಗಳಿದ್ದಾರೆ. ಅದರಲ್ಲೂ ಬಿಪಿ, ಸಕ್ಕರೆ ಖಾಯಿಲೆಯವರಂತೂ ಮಾಮೂಲು. ಅತೀ ಸಣ್ಣ ವಯಸ್ಸಿನ ಮಕ್ಕಳನ್ನು ಬಿಡುತ್ತಿಲ್ಲ ಈ ಡಯಾಬಿಟೀಸ್. ಇತ್ತೀಚೆಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಸಹಯೋಗದ‍ಲ್ಲಿ ನಡೆಸಲಾದ ಅಧ್ಯಯನವು ಭಾರತ ದೇಶದಲ್ಲಿ ಇರುವ ಡಯಾಬಿಟಿಸ್ ರೋಗಿಗಳ ಬಗ್ಗೆ ಅಂಕಿ ಅಂಶಗಳನ್ನು ಹೊರಹಾಕಿದೆ. 

ಭಾರತ ದೇಶದಲ್ಲಿ 101.3 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 11.4% ಜನರು ಮಧುಮೇಹವನ್ನು ಹೊಂದಿರುತ್ತಾರೆ ಎಂದು ಅಂದಾಜಿಸಿದೆ. ಭಾರತದಲ್ಲಿ 136 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 15.3% ಜನರು ಪೂರ್ವ-ಮಧುಮೇಹ (ಪ್ರೀ-ಡಯಾಬಿಟೀಸ್‌) ಹೊಂದಿರಬಹುದು ಎಂದು ಅಧ್ಯಯನ ಬಹಿರಂಗಪಡಿಸಿದೆ.

ವ್ಯಕ್ತಿಯ ರಕ್ತದಲ್ಲಿನ ಸಕ್ಕರೆ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದರೆ ಪೂರ್ವ ಮಧುಮೇಹ ಎಂದು ಕರೆಯಲಾಗುತ್ತದೆ. ಆದರೆ ಮಧುಮೇಹ ಎಂದು ವರ್ಗೀಕರಿಸಲು ಇಷ್ಟು ಸಾಕಾಗುವುದಿಲ್ಲ. ‘ದಿ ಲ್ಯಾನ್ಸೆಟ್ ಡಯಾಬಿಟಿಸ್ ಅಂಡ್ ಎಂಡೋಕ್ರೈನಾಲಜಿ ಮೆಡಿಕಲ್ ಜರ್ನಲ್‌’ನಲ್ಲಿ ಪ್ರಕಟವಾದ ಈ ಅಧ್ಯಯನವು, “ಭಾರತದಲ್ಲಿ ಚಯಾಪಚಯ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಹರಡುವಿಕೆ”ಯನ್ನು ಪ್ರಮಾಣೀಕರಿಸಲು ಪ್ರಯತ್ನಿಸಿದೆ.

 

‘ಮೋಹನ್ ಮಧುಮೇಹ ಸ್ಪೆಷಾಲಿಟೀಸ್ ಸೆಂಟರ್‌’ನ ಅಧ್ಯಯನದ ಮುಖ್ಯ ಲೇಖಕಿ, ವ್ಯವಸ್ಥಾಪಕ ನಿರ್ದೇಶಕಿ ಎಂ.ಅಂಜನಾ ಅವರು ಪ್ರತಿಕ್ರಿಯಿಸಿದ್ದು, “ಪ್ರಸ್ತುತ ಮಧುಮೇಹದ ಹರಡುವಿಕೆ ಕಡಿಮೆ ಇರುವ ರಾಜ್ಯಗಳಲ್ಲಿ ಪ್ರಿ-ಡಯಾಬಿಟಿಸ್ ಮಟ್ಟಗಳು ಹೆಚ್ಚಿವೆ” ಎಂದಿರುವುದಾಗಿ  ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಪೂರ್ವ-ಮಧುಮೇಹ ಇದ್ದರೆ, ಅದು ಮಧುಮೇಹಕ್ಕೆ ಅತ್ಯಂತ ವೇಗವಾಗಿ ಪರಿವರ್ತನೆಯಾಗುವ ಸಾಧ್ಯತೆ ಇರುತ್ತದೆ. ಪೂರ್ವ ಮಧುಮೇಹ ಹೊಂದಿರುವ 60% ಕ್ಕಿಂತ ಹೆಚ್ಚು ಜನರು ಮುಂದಿನ ಐದು ವರ್ಷಗಳಲ್ಲಿ ಮಧುಮೇಹಿಗಳಾಗುತ್ತಾರೆ” ಎಂದಿದ್ದಾರೆ ಅಂಜಲಿ.

ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ 39.5% ಜನರು ಹೊಟ್ಟೆಯ ಬೊಜ್ಜು ಹೊಂದಿದ್ದರೆ, 28.6% ಸಾಮಾನ್ಯ ಬೊಜ್ಜು ಹೊಂದಿದ್ದರು ಎಂದು ಸಂಶೋಧನೆ ಹೇಳಿದೆ. ಅಧ್ಯಯನ ಮಾಡಿದವರಲ್ಲಿ 81.2% ರಷ್ಟು ಕೊಲೆಸ್ಟ್ರಾಲ್, ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ ಕೊಲೆಸ್ಟ್ರಾಲ್ ಮತ್ತು ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್‌ನಂತಹ ಅಸಮತೋಲನವನ್ನು ಹೊಂದಿದ್ದಾರೆ ಎಂದಿದೆ. ಈ ಅಧ್ಯಯನವು 2008 ಮತ್ತು 2020ರ ನಡುವೆ ನಡೆದಿದೆ. 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1,13,043 ವ್ಯಕ್ತಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror