ಆರೋಗ್ಯ

ಭಾರತದಲ್ಲಿ 100 ಮಿಲಿಯನ್ ಮಧುಮೇಹಿಗಳು…! | ಐಸಿಎಂಆರ್ ಅಧ್ಯಯನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚಿನ ದಿನಗಳಲ್ಲಿ ಆರೋಗ್ಯ ರಕ್ಷಣೆಯೇ ದೊಡ್ಡ ಸಮಸ್ಯೆಯಾಗಿದೆ. ಪ್ರತಿ ಮನೆ ಮನೆಯಲ್ಲೂ ರೋಗಿಗಳಿದ್ದಾರೆ. ಅದರಲ್ಲೂ ಬಿಪಿ, ಸಕ್ಕರೆ ಖಾಯಿಲೆಯವರಂತೂ ಮಾಮೂಲು. ಅತೀ ಸಣ್ಣ ವಯಸ್ಸಿನ ಮಕ್ಕಳನ್ನು ಬಿಡುತ್ತಿಲ್ಲ ಈ ಡಯಾಬಿಟೀಸ್. ಇತ್ತೀಚೆಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಸಹಯೋಗದ‍ಲ್ಲಿ ನಡೆಸಲಾದ ಅಧ್ಯಯನವು ಭಾರತ ದೇಶದಲ್ಲಿ ಇರುವ ಡಯಾಬಿಟಿಸ್ ರೋಗಿಗಳ ಬಗ್ಗೆ ಅಂಕಿ ಅಂಶಗಳನ್ನು ಹೊರಹಾಕಿದೆ. 

Advertisement
Advertisement

ಭಾರತ ದೇಶದಲ್ಲಿ 101.3 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 11.4% ಜನರು ಮಧುಮೇಹವನ್ನು ಹೊಂದಿರುತ್ತಾರೆ ಎಂದು ಅಂದಾಜಿಸಿದೆ. ಭಾರತದಲ್ಲಿ 136 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 15.3% ಜನರು ಪೂರ್ವ-ಮಧುಮೇಹ (ಪ್ರೀ-ಡಯಾಬಿಟೀಸ್‌) ಹೊಂದಿರಬಹುದು ಎಂದು ಅಧ್ಯಯನ ಬಹಿರಂಗಪಡಿಸಿದೆ.

ವ್ಯಕ್ತಿಯ ರಕ್ತದಲ್ಲಿನ ಸಕ್ಕರೆ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದರೆ ಪೂರ್ವ ಮಧುಮೇಹ ಎಂದು ಕರೆಯಲಾಗುತ್ತದೆ. ಆದರೆ ಮಧುಮೇಹ ಎಂದು ವರ್ಗೀಕರಿಸಲು ಇಷ್ಟು ಸಾಕಾಗುವುದಿಲ್ಲ. ‘ದಿ ಲ್ಯಾನ್ಸೆಟ್ ಡಯಾಬಿಟಿಸ್ ಅಂಡ್ ಎಂಡೋಕ್ರೈನಾಲಜಿ ಮೆಡಿಕಲ್ ಜರ್ನಲ್‌’ನಲ್ಲಿ ಪ್ರಕಟವಾದ ಈ ಅಧ್ಯಯನವು, “ಭಾರತದಲ್ಲಿ ಚಯಾಪಚಯ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಹರಡುವಿಕೆ”ಯನ್ನು ಪ್ರಮಾಣೀಕರಿಸಲು ಪ್ರಯತ್ನಿಸಿದೆ.

 

‘ಮೋಹನ್ ಮಧುಮೇಹ ಸ್ಪೆಷಾಲಿಟೀಸ್ ಸೆಂಟರ್‌’ನ ಅಧ್ಯಯನದ ಮುಖ್ಯ ಲೇಖಕಿ, ವ್ಯವಸ್ಥಾಪಕ ನಿರ್ದೇಶಕಿ ಎಂ.ಅಂಜನಾ ಅವರು ಪ್ರತಿಕ್ರಿಯಿಸಿದ್ದು, “ಪ್ರಸ್ತುತ ಮಧುಮೇಹದ ಹರಡುವಿಕೆ ಕಡಿಮೆ ಇರುವ ರಾಜ್ಯಗಳಲ್ಲಿ ಪ್ರಿ-ಡಯಾಬಿಟಿಸ್ ಮಟ್ಟಗಳು ಹೆಚ್ಚಿವೆ” ಎಂದಿರುವುದಾಗಿ  ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಪೂರ್ವ-ಮಧುಮೇಹ ಇದ್ದರೆ, ಅದು ಮಧುಮೇಹಕ್ಕೆ ಅತ್ಯಂತ ವೇಗವಾಗಿ ಪರಿವರ್ತನೆಯಾಗುವ ಸಾಧ್ಯತೆ ಇರುತ್ತದೆ. ಪೂರ್ವ ಮಧುಮೇಹ ಹೊಂದಿರುವ 60% ಕ್ಕಿಂತ ಹೆಚ್ಚು ಜನರು ಮುಂದಿನ ಐದು ವರ್ಷಗಳಲ್ಲಿ ಮಧುಮೇಹಿಗಳಾಗುತ್ತಾರೆ” ಎಂದಿದ್ದಾರೆ ಅಂಜಲಿ.

Advertisement

ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ 39.5% ಜನರು ಹೊಟ್ಟೆಯ ಬೊಜ್ಜು ಹೊಂದಿದ್ದರೆ, 28.6% ಸಾಮಾನ್ಯ ಬೊಜ್ಜು ಹೊಂದಿದ್ದರು ಎಂದು ಸಂಶೋಧನೆ ಹೇಳಿದೆ. ಅಧ್ಯಯನ ಮಾಡಿದವರಲ್ಲಿ 81.2% ರಷ್ಟು ಕೊಲೆಸ್ಟ್ರಾಲ್, ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ ಕೊಲೆಸ್ಟ್ರಾಲ್ ಮತ್ತು ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್‌ನಂತಹ ಅಸಮತೋಲನವನ್ನು ಹೊಂದಿದ್ದಾರೆ ಎಂದಿದೆ. ಈ ಅಧ್ಯಯನವು 2008 ಮತ್ತು 2020ರ ನಡುವೆ ನಡೆದಿದೆ. 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1,13,043 ವ್ಯಕ್ತಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 hour ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

11 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

13 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

17 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago